ಲಾಲೂ ಪ್ರಸಾದ್ ಯಾದವ್ 
ದೇಶ

2015ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಖುಲಾಸೆ

ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು 2015ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಬುಧವಾರ ಖುಲಾಸೆಗೊಳಿಸಲಾಗಿದೆ.

ಪಾಟ್ನಾ: ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು 2015ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಬುಧವಾರ ಖುಲಾಸೆಗೊಳಿಸಲಾಗಿದೆ.

2015ರಲ್ಲಿ ತಮ್ಮ ಕಿರಿಯ ಪುತ್ರ ತೇಜಸ್ವಿ ಯಾದವ್ ಪರವಾಗಿ ರಾಘೋಪುರದಿಂದ ಪ್ರಚಾರ ಪ್ರಾರಂಭಿಸಿದಾಗ, ಆರ್‌ಜೆಡಿ ಮುಖ್ಯಸ್ಥರು ವಿಧಾನಸಭೆ ಚುನಾವಣೆಯನ್ನು 'ಹಿಂದುಳಿದ ಜಾತಿಗಳು ಮತ್ತು ಮುಂದುವರಿದ ಜಾತಿಗಳ' ನಡುವಿನ ನೇರ ಹೋರಾಟ ಎಂದು ಬಣ್ಣಿಸಿದ್ದರು ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಸೋಲಿಸಲು ಯಾದವರು ಹಾಗೂ ಇತರ ಹಿಂದುಳಿದ ಜಾತಿಗಳು ಜಾತ್ಯತೀತ ಮೈತ್ರಿಯಡಿ ಒಂದಾಗಬೇಕೆಂದು ಕರೆ ನೀಡಿದ್ದರು.

ಜಾತಿವಾದದ ಹೇಳಿಕೆ ನೀಡಿದ್ದಕ್ಕಾಗಿ ಲಾಲು ಪ್ರಸಾದ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ನಂತರ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಚುನಾವಣಾ ಆಯೋಗವು ಆರ್‌ಜೆಡಿ ನಾಯಕನಿಗೆ ನೋಟಿಸ್ ನೀಡಿತ್ತು.

ಆದರೆ, ಬುಧವಾರ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಲಾಲು ಪ್ರಸಾದ್ ಯಾದವ್ ಅವರನ್ನು ಖುಲಾಸೆಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

ಇರಾನ್ ಜೊತೆಗೆ ಸರಣಿ ಮಾತುಕತೆ: ಹಾರ್ಮುಜ್ ಜಲಸಂಧಿ ದಾಟಿದ LPG ಹೊತ್ತ ಭಾರತದ 2 ಹಡಗುಗಳು!

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಹೊಸ ಖಮೇನಿ ಭಯೋತ್ಪಾದಕ ನಾಯಕ; ಆತನ ಬಗ್ಗೆ ಮಾಹಿತಿ ನೀಡಿದವರಿಗೆ 10 ಮಿಲಿಯನ್ ಡಾಲರ್ ಬಹುಮಾನ: ಅಮೆರಿಕ

ಒಡಿಶಾ 'ಕೈ' ಶಾಸಕರಿಗೆ' ಟ್ರಬಲ್ ಶೂಟರ್ ಡಿಕೆಶಿ ಆತಿಥ್ಯ: 'ಆಪರೇಷನ್ ಕಮಲ' ತಡೆಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮ; ಕಾಂಗ್ರೆಸ್ ಸಮರ್ಥನೆ

SCROLL FOR NEXT