ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್ 
ದೇಶ

58 ಬಾರಿ ಕರೆ ಮಾಡಿ ಚಿತ್ರಹಿಂಸೆ; ಮದ್ರಾಸ್ ಲಾಯರ್ ಗೆ 2 ಲಕ್ಷ ರೂ. ಪರಿಹಾರ ನೀಡಲು ಬ್ಯಾಂಕ್ ಗೆ ನಿರ್ದೇಶನ

ಗ್ರಾಹಕರೊಬ್ಬರು ಕ್ರೆಡಿಟ್ ಕಾರ್ಡ್ ನ ಬಾಕಿ ಮೊತ್ತವನ್ನು ಸೂಕ್ತ ಸಮಯದಲ್ಲಿ ಪಾವತಿ ಮಾಡಿದ್ದರೂ, ಕರೆ/ ಮೆಸೇಜ್  ಮಾಡಿ ಹಣ ಪಾವತಿಸುವಂತೆ ಚಿತ್ರ ಹಿಂಸೆ ನೀಡುತ್ತಿದ್ದ ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್ ಸಂತ್ರಸ್ತ ವ್ಯಕ್ತಿಗೆ 2 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಗ್ರಾಹಕ ಆಯೋಗ ನಿರ್ದೇಶನ ನೀಡಿದೆ. 

ಬೆಂಗಳೂರು: ಗ್ರಾಹಕರೊಬ್ಬರು ಕ್ರೆಡಿಟ್ ಕಾರ್ಡ್ ನ ಬಾಕಿ ಮೊತ್ತವನ್ನು ಸೂಕ್ತ ಸಮಯದಲ್ಲಿ ಪಾವತಿ ಮಾಡಿದ್ದರೂ, ಕರೆ/ ಮೆಸೇಜ್ ಮಾಡಿ ಹಣ ಪಾವತಿಸುವಂತೆ ಚಿತ್ರ ಹಿಂಸೆ ನೀಡುತ್ತಿದ್ದ ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್ ಸಂತ್ರಸ್ತ ವ್ಯಕ್ತಿಗೆ 2 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಗ್ರಾಹಕ ಆಯೋಗ ನಿರ್ದೇಶನ ನೀಡಿದೆ. 

ಮದ್ರಾಸ್ ನ ಲಾಯರ್ ಲೋಕನಾಥನ್ ಜಯಕುಮಾರ್ ಗೆ ಬ್ಯಾಂಕ್ ಬರೊಬ್ಬರಿ 58 ಬಾರಿ ಕರೆ/ ಮೆಸೇಜ್ ಗಳನ್ನು ಮಾಡಿ ಚಿತ್ರ ಹಿಂಸೆ ನೀಡಿತ್ತು. 

ಗ್ರಾಹಕರು ಸೂಕ್ತ ಸಮಯದಲ್ಲಿ ಹಣ ಪಾವತಿಸಿದ್ದರೂ ಬ್ಯಾಂಕ್ ನ ಲೋಪದೋಷಗಳು ಸ್ಪಷ್ಟವಾಗಿದ್ದರಿಂದ ಬೆಂಗಳೂರು ನಗರ ಎರಡನೇ ಹೆಚ್ಚುವರಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಸಂತ್ರಸ್ತ ವ್ಯಕ್ತಿಗೆ 2 ಲಕ್ಷ ರೂಪಾಯಿ ಮೊತ್ತಕ್ಕೆ ಪ್ರತಿ ವರ್ಷಕ್ಕೆ ಶೇ.8 ರಷ್ಟು ಬಡ್ಡಿ ಸೇರಿಸಿ ಪರಿಹಾರವನ್ನು ನೀಡಬೇಕು ಜೊತೆಗೆ ದಾವೆ ವೆಚ್ಚಗಳಿಗಾಗಿ ಹೆಚ್ಚುವರಿ 10,000 ರೂಪಾಯಿ ನೀಡಬೇಕು ಎಂದು ಆಯೋಗ ಸೂಚಿಸಿದೆ. 

75 ವರ್ಷದ ವಕೀಲ ಲೋಕನಾಥನ್ ಜಯಕುಮಾರ್, ಕೋರಮಂಗಲ ನಿವಾಸಿಯಾಗಿದ್ದು, 25 ವರ್ಷಗಳಿಂದ ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್ ನ ಕ್ರೆಡಿಟ್ ಕಾರ್ಡ್ ಹೊಂದಿದ್ದಾರೆ. ಬಾಕಿ ಪಾವತಿಸಬೇಕಿದ್ದ, 31,271 ರೂಪಾಯಿಗಳ ಹಣವನ್ನು ಗಡುವು ಮಿತಿಗೂ ಮುನ್ನವೇ 2022 ರ ಜನವರಿಯಂದು ಚೆಕ್ ಮೂಲಕ ಪಾವತಿಸಿದ್ದರು. 

ಕೆಲವು ದಿನಗಳ ನಂತರ ಬ್ಯಾಂಕ್ ಬಾಕಿ ಇರುವ ಹಣ ಪಾವತಿ ಮಾಡುವಂತೆ ನಿರಂತರವಾಗಿ ಕರೆ/ ಮೆಸೇಜ್ ಗಳ ಮೂಲಕ ಚಿತ್ರ ಹಿಂಸೆ ನೀಡಲಾರಂಭಿಸಿತು. ಈ ಹಿನ್ನೆಲೆಯಲ್ಲಿ ವಕೀಲರು ಆಯೋಗಕ್ಕೆ ದೂರು ನೀಡಿದ್ದರು. ಆಯೋಗದಿಂದ ನೊಟೀಸ್ ಜಾರಿಯಾದರೂ ಉತ್ತರಿಸದೇ ಇದ್ದ ಹಿನ್ನೆಲೆಯಲ್ಲಿ ಬ್ಯಾಂಕ್ ಲೋಪದೋಷ ಸಾಬೀತಾಗಿದ್ದು ದಂಡ ವಿಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT