ಲೇಖಕ ಸಲ್ಮಾನ್ ರಶ್ದಿ (ಸಂಗ್ರಹ ಚಿತ್ರ) 
ದೇಶ

ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲಿನ ದಾಳಿಯನ್ನು ಖಂಡಿಸಿದ ಭಾರತ

ಖ್ಯಾತ ಲೇಖಕ ಸಲ್ಮಾನ್ ರಶ್ದಿ  ಅವರ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಭಾರತ ಗುರುವಾರ ತನ್ನ ಮೊದಲ ಪ್ರತಿಕ್ರಿಯೆಯಾಗಿ 'ಭಯಾನಕ ದಾಳಿ'ಯನ್ನು ಖಂಡಿಸಿದೆ ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ.

ನವದೆಹಲಿ:  ಖ್ಯಾತ ಲೇಖಕ ಸಲ್ಮಾನ್ ರಶ್ದಿ  ಅವರ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಭಾರತ ಗುರುವಾರ ತನ್ನ ಮೊದಲ ಪ್ರತಿಕ್ರಿಯೆಯಾಗಿ 'ಭಯಾನಕ ದಾಳಿ'ಯನ್ನು ಖಂಡಿಸಿದೆ ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ.

ಆಗಸ್ಟ್ 12 ರಂದು ನ್ಯೂಯಾರ್ಕ್‌ನ ಚೌಟಕ್ವಾ ಇನ್‌ಸ್ಟಿಟ್ಯೂಶನ್‌ನಲ್ಲಿ ಉಪನ್ಯಾಸ ನೀಡಲು ಹೋಗಿದ್ದ ರಶ್ದಿ ಅವರ ಕುತ್ತಿಗೆ ಮತ್ತು ಮುಂಡಕ್ಕೆ ದುಷ್ಕರ್ಮಿಗಳು ಇರಿದಿದ್ದರು.

'ಭಾರತವು ಯಾವಾಗಲೂ ಹಿಂಸೆ ಮತ್ತು ಉಗ್ರವಾದದ ವಿರುದ್ಧ ನಿಂತಿದೆ. ನಾವು ಸಲ್ಮಾನ್ ರಶ್ದಿ ಅವರ ಮೇಲಿನ ಭೀಕರ ದಾಳಿಯನ್ನು ಖಂಡಿಸುತ್ತೇವೆ ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಮ್ಮ ವಾರದ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪಶ್ಚಿಮ ನ್ಯೂಯಾರ್ಕ್ ನಲ್ಲಿ ಉಪನ್ಯಾಸ ಮಾಡುತ್ತಿರುವಾಗ ಲೇಖಕ ಸಲ್ಮಾನ್ ರಶ್ದಿ ಅವರ ಮೇಲೆ ದಾಳಿ ನಡೆಸಿದ ವ್ಯಕ್ತಿಗೆ ನ್ಯಾಯಾಧೀಶರು ಜಾಮೀನು ನಿರಾಕರಿಸಿದ್ದಾರೆ. ಹಾದಿ ಮತರ್ ಎಂಬ 24 ವರ್ಷದ ಯುವಕ ರಶ್ದಿ ಮೇಲೆ ದಾಳಿ ನಡೆಸಿದ್ದನು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT