ದೆಹಲಿ ಸಿಎಂ ಕೇಜ್ರಿವಾಲ್ 
ದೇಶ

ಬಿಜೆಪಿ ರಾಜ್ಯ ಸರ್ಕಾರಗಳ ಸರಣಿ ಹಂತಕ: ದೆಹಲಿ ಸಿಎಂ ಕೇಜ್ರಿವಾಲ್

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಬಿಜೆಪಿ ರಾಜ್ಯ ಸರ್ಕಾರಗಳ ಸರಣಿ ಹಂತಕ ಎಂದು ಶುಕ್ರವಾರ ಆಕ್ರೋಶ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಬಿಜೆಪಿ ರಾಜ್ಯ ಸರ್ಕಾರಗಳ ಸರಣಿ ಹಂತಕ ಎಂದು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ದೆಹಲಿ ವಿಧಾನಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್, ದೆಹಲಿ ಸಚಿವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳು ಇತ್ತೀಚೆಗೆ ನಡೆಸಿದ ದಾಳಿಗಳು ಗುಜರಾತ್ ಚುನಾವಣೆಗೆ ಸಂಬಂಧಿಸಿವೆ ಎಂದು ಆರೋಪಿಸಿದರು.

ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ದೆಹಲಿ ಸಿಎಂ, ಕೇಂದ್ರ ಸರ್ಕಾರ ಹಣ ಬಳಸಿ ಹಲವು ರಾಜ್ಯ ಸರ್ಕಾರಗಳನ್ನು ಬುಡಮೇಲು ಮಾಡಿದೆ. ಸರ್ಕಾರಗಳನ್ನು ಉರುಳಿಸುವ ಸರಣಿ ಹಂತಕನಂತೆ ವರ್ತಿಸುತ್ತಿದೆ. ಆದರೆ ಎಎಪಿ ಶಾಸಕರು ಪಕ್ಷಾಂತರ ಮಾಡಿಲ್ಲ ಎಂದು ಸಾಬೀತುಪಡಿಸಲು ತಾವು ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸುವುದಾಗಿ ತಿಳಿಸಿದರು.

"ಗುಜರಾತ್‌ನಲ್ಲಿ ಬಿಜೆಪಿಯ ಭಧ್ರ ಕೋಟೆ ಅಪಾಯದಲ್ಲಿದೆ ಮತ್ತು ಈಗ ಕುಸಿಯುತ್ತಿದೆ. ಮುಂಬರುವ ಗುಜರಾತ್ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ನಮ್ಮ ಮೇಲೆ ಇಡಿ, ಸಿಬಿಐ ದಾಳಿ ನಡೆಸುತ್ತಿದೆ" ಎಂದು ಆರೋಪಿಸಿದರು.

ತಮ್ಮ ಡೆಪ್ಯೂಟಿ ಸಿಎಂ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದಾಗ ಒಂದು ಪೈಸೆಯೂ ಸಿಗಲಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.

"ಪಟ್ಟಭದ್ರ ಹಿತಾಸಕ್ತಿಗಳು ಈಗ ದೆಹಲಿ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿವೆ. ಅವರು ಮಣಿಪುರ, ಗೋವಾ, ಮಧ್ಯಪ್ರದೇಶ, ಬಿಹಾರ, ಅರುಣಾಚಲ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಸರ್ಕಾರಗಳನ್ನು ಉರುಳಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಸರಣಿ ಹಂತಕ ಅಲೆದಾಡುತ್ತಿದ್ದಾನೆ" ಎಂದು ಕೇಜ್ರಿವಾಲ್ ಸದನದಲ್ಲಿ ವಾಗ್ದಾಳಿ ನಡೆಸಿದರು.

ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಪೆಟ್ರೋಲ್, ಡೀಸೆಲ್, ಎಲ್ ಪಿಜಿ, ಹಾಲು, ಮೊಸರು ಎಲ್ಲದರ ಮೇಲೂ ಜಿಎಸ್ ಟಿ ವಿಧಿಸುತ್ತಿದ್ದಾರೆ. ಇದರಿಂದ ಬರುವ ಹಣ ಎರಡು ವಿಚಾರಗಳಿಗೆ ಬಳಸಲಾಗುತ್ತಿದೆ. ಒಂದು ಅವರ ಶ್ರೀಮಂತ ಉದ್ಯಮಿ ಸ್ನೇಹಿತರ ಸಾಲ ತೀರಿಸಲು ಮತ್ತು ಮತ್ತೊಂದು ಬೇರೆ ಪಕ್ಷಗಳ ಶಾಸಕರನ್ನು ಖರೀದಿಸಲು ಎಂದು ದೆಹಲಿ ಸಿಎಂ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT