ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ 
ದೇಶ

ಅನರ್ಹತೆ ಭೀತಿ: ಯುಪಿಎ ಶಾಸಕರ ಸಭೆ ಕರೆದ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಅಡಿಯಲ್ಲಿ ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಶಿಫಾರಸು ಮಾಡಿದ ಮಾರನೇ ದಿನ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಶುಕ್ರವಾರ...

ನವದೆಹಲಿ/ರಾಂಚಿ: ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಅಡಿಯಲ್ಲಿ ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ಶಿಫಾರಸು ಮಾಡಿದ ಮಾರನೇ ದಿನ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಶುಕ್ರವಾರ ಯುಪಿಎ ಶಾಸಕರ ಸಭೆ ಕರೆದಿದ್ದಾರೆ.

ಮುಂದಿನ ರಾಜಕೀಯ ತಂತ್ರಗಾರಿಕೆ ಕುರಿತು ಶಾಸಕರೊಂದಿಗೆ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಚುನಾವಣಾ ಆಯೋಗವು ತನ್ನ ವರದಿಯನ್ನು ಗುರುವಾರ ರಾಜ್ಯಪಾಲ ರಮೇಶ್ ಬೈಸ್‌ಗೆ ಸಲ್ಲಿಸಿದೆ ಎಂಬ ವರದಿಗಳ ನಂತರ, ಇದಕ್ಕೆ ಪ್ರತಿಪಕ್ಷ ಬಿಜೆಪಿಯೇ ಕಾರಣ ಎಂದು ದೂಷಿಸಿದ್ದರು. ಬಿಜೆಪಿ ನಾಯಕರು ಮತ್ತು ಅವರ ಕೈಗೊಂಬೆಗಳು ಮುಚ್ಚಿದ ಕವರ್‌ನಲ್ಲಿರುವ ವರದಿಯನ್ನು ಸಿದ್ಧಪಡಿಸಿರುವಂತೆ ತೋರುತ್ತಿದೆ ಎಂದು ಸೋರೆನ್ ಆರೋಪಿಸಿದ್ದರು. 

ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅನರ್ಹತೆ ಭೀತಿ ಎದುರಿಸುತ್ತಿದ್ದು,  ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಕೇಂದ್ರ ಚುನಾವಣಾ ಆಯೋಗ ಶಿಫಾರಸು ಮಾಡಿದೆ ಎನ್ನಲಾಗಿದೆ. ಈ ಕುರಿತು ಹಲವು ಮಾಧ್ಯಮಗಳು ವರದಿ ಮಾಡಿದ್ದು, ಈ ಕುರಿತು ಚುನಾವಣಾ ಆಯೋಗ ಮಾತ್ರ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT