ರಾಹುಲ್ ಗಾಂಧಿ - ಗುಲಾಂ ನಬಿ ಆಜಾದ್ 
ದೇಶ

ಪಕ್ಷವನ್ನು 'ಸಂಪೂರ್ಣವಾಗಿ ನಾಶಪಡಿಸಲಾಗಿದೆ', ಇದಕ್ಕೆ ನಾಯಕತ್ವವೇ ನೇರ ಹೊಣೆ: ಕಾಂಗ್ರೆಸ್ ತ್ಯಜಿಸಿದ ಆಜಾದ್

ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಶುಕ್ರವಾರ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಕಪಿಲ್ ಸಿಬಲ್ ಮತ್ತು ಅಶ್ವನಿ ಕುಮಾರ್ ನಂತರ ಪಕ್ಷಕ್ಕೆ ಮತ್ತೊಂದು ಆಘಾತ...

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಶುಕ್ರವಾರ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಕಪಿಲ್ ಸಿಬಲ್ ಮತ್ತು ಅಶ್ವನಿ ಕುಮಾರ್ ನಂತರ ಪಕ್ಷಕ್ಕೆ ಮತ್ತೊಂದು ಆಘಾತ ನೀಡಿದ್ದಾರೆ. 

ಆಜಾದ್ ಅವರು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಐದು ಪುಟಗಳ ರಾಜೀನಾಮೆ ಪತ್ರ ಬರೆದಿದ್ದು, 
ಪಕ್ಷವನ್ನು "ಸಂಪೂರ್ಣವಾಗಿ ನಾಶಪಡಿಸಲಾಗಿದೆ". ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ತನಗೆ ಲಭ್ಯವಿರುವ ರಾಜಕೀಯ ಜಾಗವನ್ನು ಬಿಜೆಪಿಗೆ ಮತ್ತು ರಾಜ್ಯ ಮಟ್ಟದ ಜಾಗವನ್ನು ಪ್ರಾದೇಶಿಕ ಪಕ್ಷಗಳಿಗೆ ಬಿಟ್ಟುಕೊಟ್ಟಿದೆ ಎಂದು ದೂರಿದ್ದಾರೆ.

"ಕಳೆದ ಎಂಟು ವರ್ಷಗಳಲ್ಲಿ ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ದಂಗೆ ಏಳಲು ಪ್ರಯತ್ನಿಸಿದ್ದರಿಂದ ಇದೆಲ್ಲವೂ ಸಂಭವಿಸಿದೆ. ಗಂಭೀರವಲ್ಲದ ವ್ಯಕ್ತಿಯ ಕೈಗೆ ಪಕ್ಷದ ಚುಕ್ಕಾಣಿ ನೀಡುವ ಯತ್ನಗಳು ನಡೆದವು. ಪಕ್ಷಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಪ್ರಮುಖ ನಾಯಕರನ್ನು ಕಡೆಗಣಿಸಲಾಯಿತು. ಕಾಂಗ್ರೆಸ್ ನ ಇಂದಿನ ಪರಿಸ್ಥಿತಿಗೆ ಇದೆಲ್ಲವೂ ಕಾರಣ’’ ಆಜಾದ್ ಅವರು ಪರೋಕ್ಷವಾಗಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭಾರತಕ್ಕೆ ಯಾವುದು ಸರಿ ಎಂಬುದನ್ನು ನಿರ್ಧರಿಸಲು ಎಐಸಿಸಿಯನ್ನು ಮುನ್ನಡೆಸುತ್ತಿರುವ ಕೂಟ ಇಚ್ಛಾಶಕ್ತಿ ಮತ್ತು ಸಾಮರ್ಥ್ಯ ಎರಡನ್ನೂ ಕಳೆದುಕೊಂಡಿದೆ ಎಂದು ಕಾಂಗ್ರೆಸ್ ನಾಯಕತ್ವ ಬದಲಾವಣೆ ಬಯಸುತ್ತಿರುವ ಜಿ-23 ಗುಂಪಿನ ಭಾಗವಾಗಿರುವ ಆಜಾದ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಗುಲಾಂ ನಬಿ ಆಜಾದ್ ರಾಜೀನಾಮೆ ಅತ್ಯಂತ ದುರದೃಷ್ಟಕರ ಮತ್ತು ವಿಷಾದನೀಯ; ಕಾಂಗ್ರೆಸ್ ತನ್ನ ಪಕ್ಷ ಜೋಡಿಸುವ ಕೆಲಸ ಮೊದಲು ಮಾಡಲಿ: ಬಿಜೆಪಿ ವ್ಯಂಗ್ಯ
 
ಇನ್ನು ಕಳೆದ ಕೆಲ ವರ್ಷಗಳಲ್ಲಿ ಕಾಂಗ್ರೆಸ್‌ನ ಕುಸಿತದ ಬಗ್ಗೆ ತಮ್ಮ ಉಲ್ಲೇಖಿಸಿದ ಆಜಾದ್‌, ‘2014ರಿಂದ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ, ಕಾಂಗ್ರೆಸ್ ಎರಡು ಲೋಕಸಭಾ ಚುನಾವಣೆಗಳನ್ನು ಅವಮಾನಕರ ರೀತಿಯಲ್ಲಿ ಸೋತಿದೆ. 2014-2022ರ ನಡುವೆ ನಡೆದ 49 ವಿಧಾನಸಭಾ ಚುನಾವಣೆಗಳಲ್ಲಿ 39ರಲ್ಲಿ ಪರಾಭವಗೊಂಡಿದೆ’ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

SCROLL FOR NEXT