ಸಂಗ್ರಹ ಚಿತ್ರ 
ದೇಶ

ಡ್ರಗ್ ಟೆಸ್ಟ್ ಪರೀಕ್ಷೆಯಲ್ಲಿ ವಿಫಲ: ಪ್ರಮುಖ ವಿಮಾನಯಾನ ಸಂಸ್ಥೆಯ ಪೈಲಟ್ ಅನ್ನು ಕರ್ತವ್ಯದಿಂದ ತೆಗೆದ ಡಿಜಿಸಿಎ!

ಡ್ರಗ್ ಪರೀಕ್ಷೆಯಲ್ಲಿ ಪ್ರಮುಖ ವಿಮಾನಯಾನ ಸಂಸ್ಥೆಯ ಪೈಲಟ್ ವಿಫಲರಾದ ಕಾರಣ ಅವರನ್ನು ವಿಮಾನ ಕರ್ತವ್ಯದಿಂದ ತೆಗೆದುಹಾಕಲಾಗಿದೆ ಎಂದು ಡಿಜಿಸಿಎಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಡ್ರಗ್ ಪರೀಕ್ಷೆಯಲ್ಲಿ ಪ್ರಮುಖ ವಿಮಾನಯಾನ ಸಂಸ್ಥೆಯ ಪೈಲಟ್ ವಿಫಲರಾದ ಕಾರಣ ಅವರನ್ನು ವಿಮಾನ ಕರ್ತವ್ಯದಿಂದ ತೆಗೆದುಹಾಕಲಾಗಿದೆ ಎಂದು ಡಿಜಿಸಿಎಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜನವರಿ 31ರಿಂದ ಜಾರಿಗೆ ಬಂದ ಡ್ರಗ್ ಪರೀಕ್ಷೆಯಲ್ಲಿ ವಿಫಲರಾದ ನಾಲ್ಕನೇ ಪೈಲಟ್ ಇವರಾಗಿದ್ದಾರೆ. ಸೈಕೋಆಕ್ಟಿವ್ ವಸ್ತುಗಳ ಸೇವನೆಗಾಗಿ ವಾಯುಯಾನ ಸಿಬ್ಬಂದಿಯನ್ನು ಪರೀಕ್ಷಿಸುವ ವಿಧಾನ ಇದಾಗಿದೆ. ರ್ಯಾಂಡಮ್ ಆಧಾರದ ಮೇಲೆ ವಿಮಾನ ಸಿಬ್ಬಂದಿ ಮತ್ತು ATC ಗಳಿಗೆ ಪರೀಕ್ಷೆಯನ್ನು ಮಾಡಲಾಗುತ್ತದೆ.

ಇಲ್ಲಿಯವರೆಗೆ, ನಾಲ್ಕು ಪೈಲಟ್‌ಗಳು ಮತ್ತು ಒಬ್ಬ ಏರ್ ಟ್ರಾಫಿಕ್ ಕಂಟ್ರೋಲರ್(ಎಟಿಸಿ) ಸೈಕೋಆಕ್ಟಿವ್ ಪದಾರ್ಥಗಳ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. 

ಅಧಿಕಾರಿಯ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಪ್ರಮುಖ ವಿಮಾನಯಾನ ಸಂಸ್ಥೆಯ ಪೈಲಟ್ ಡ್ರಗ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಆಗಸ್ಟ್ 23ರಂದು ಸ್ವೀಕರಿಸಿದ ದೃಢೀಕರಣ ಪರೀಕ್ಷೆಯ ವರದಿಯಲ್ಲಿ ಅವರಿಗೆ ಪಾಸಿಟಿವ್ ಕಂಡುಬಂದಿದ್ದು, ವಿಮಾನದ ಕರ್ತವ್ಯದಿಂದ ಅವರನ್ನು ತೆಗೆದುಹಾಕಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಿವಿಲ್ ಏವಿಯೇಷನ್ ​​ರಿಕ್ವೈರ್‌ಮೆಂಟ್ (ಸಿಎಆರ್) ಪ್ರಕಾರ, ಮೊದಲ ಬಾರಿಗೆ ದೃಢೀಕರಣದ ಔಷಧ ಪರೀಕ್ಷೆಯ ಫಲಿತಾಂಶವು ಸಕಾರಾತ್ಮಕವಾಗಿದ್ದರೆ, ಸಂಬಂಧಪಟ್ಟ ಸಿಬ್ಬಂದಿಯನ್ನು ಡಿ-ಡಿಕ್ಷನ್ ಮತ್ತು ಪುನರ್ವಸತಿಗಾಗಿ ಸಂಬಂಧಿಸಿದ ಸಂಸ್ಥೆಯು ಡಿ-ಅಡಿಕ್ಷನ್ ಸೆಂಟರ್‌ಗೆ ಕಳುಹಿಸಲಾಗುತ್ತದೆ.

ಅದೇ ಸಿಬ್ಬಂದಿಗೆ ಎರಡನೇ ಬಾರಿಗೂ ಪಾಸಿಟಿವ್ ಬಂದರೆ ಮೂರು ವರ್ಷಗಳ ಅವಧಿಗೆ ಅವನ ಅಥವಾ ಅವಳ ಪರವಾನಗಿಯನ್ನು ಅಮಾನತುಗೊಳಿಸಲಾಗುತ್ತದೆ. ಇನ್ನು ಮೂರನೇ ಬಾರಿಗೆ ಉಲ್ಲಂಘಿಸಿದ್ದು ಪತ್ತೆಯಾದರೆ ಆ ಸಿಬ್ಬಂದಿಯ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT