ಅರವಿಂದ್ ಕೇಜ್ರಿವಾಲ್ 
ದೇಶ

ದೇಶದಲ್ಲಿ ಇತರ ಪಕ್ಷಗಳ ಸರ್ಕಾರ ಉರುಳಿಸಲು ಬಿಜೆಪಿ 6,300 ಕೋಟಿ ರೂ. ‌ವೆಚ್ಚ ಮಾಡುತ್ತಿದೆ: ಕೇಜ್ರಿವಾಲ್

ದೇಶದಲ್ಲಿ ಇತರ ಪಕ್ಷಗಳ ಸರ್ಕಾರ ಉರುಳಿಸಲು ಬಿಜೆಪಿ 6,300 ಕೋಟಿ ವೆಚ್ಚ ಮಾಡದಿದ್ದರೆ ಕೇಂದ್ರ ಸರ್ಕಾರ ಆಹಾರದ ಪದಾರ್ಥಗಳ ಮೇಲೆ ಜಿಎಸ್ ಟಿ ವಿಧಿಸುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

ನವದೆಹಲಿ: ದೇಶದಲ್ಲಿ ಇತರ ಪಕ್ಷಗಳ ಸರ್ಕಾರ ಉರುಳಿಸಲು ಬಿಜೆಪಿ 6,300 ಕೋಟಿ ವೆಚ್ಚ ಮಾಡದಿದ್ದರೆ ಕೇಂದ್ರ ಸರ್ಕಾರ ಆಹಾರದ ಪದಾರ್ಥಗಳ ಮೇಲೆ ಜಿಎಸ್ ಟಿ ವಿಧಿಸುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ. ಬಿಜೆಪಿ ರಾಜ್ಯ ಸರ್ಕಾರಗಳ ಸರಣಿ ಹಂತಕ ಎಂದು ಕರೆದ ಮಾರನೇ ದಿನ ಕೇಜ್ರಿವಾಲ್ ಈ ರೀತಿಯ ಆರೋಪ ಮಾಡಿದ್ದಾರೆ.

ದೆಹಲಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿ ಜಿಎಸ್ ಟಿ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದ ಸಂಗ್ರಹಿಸಿದ ಹಣವನ್ನು ಶಾಸಕರ ಖರೀದಿಗೆ ಬಳಸಿಕೊಳ್ಳುತ್ತಿದೆ. ಜನರು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದರೆ, ಇತರ ಪಕ್ಷಗಳ ಶಾಸಕರ ಖರೀದಿಗೆ ಬಿಜೆಪಿ ಕೋಟ್ಯಂತರ ರೂ. ವೆಚ್ಚ ಮಾಡುತ್ತಿದೆ ಎಂದು ಅವರು ಟೀಕಿಸಿದರು. 

ಮೊಸರು, ಬೆಣ್ಣೆ, ತುಪ್ಪ, ಗೋಧಿ, ಅಕ್ಕಿ ಮತ್ತಿತರ ವಸ್ತುಗಳ ಮೇಲೆ ಜಿಎಸ್ ಟಿ ವಿಧಿಸಿ, ವರ್ಷಕ್ಕೆ 7.500 ಕೋಟಿ ರೂ. ಆದಾಯವನ್ನು ಕೇಂದ್ರ ಸರ್ಕಾರ ಸಂಗ್ರಹಿಸಲಿದೆ. ಸರ್ಕಾರಗಳ ಪತನಕ್ಕೆ ಇಲ್ಲಿಯವರೆಗೂ ಬಿಜೆಪಿ 6,300 ಕೋಟಿ ರೂ. ವೆಚ್ಚ ಮಾಡಿದೆ. ಅವರು ಸರ್ಕಾರಗಳನ್ನು ಉರುಳಿಸದಿದ್ದರೆ ಗೋಧಿ, ಅಕ್ಕಿ, ಮಜ್ಜಿಗೆ ಇತ್ಯಾದಿಗಳ ಮೇಲೆ ಜಿಎಸ್‌ಟಿ ಹೇರಬೇಕಾಗುತ್ತಿರಲಿಲ್ಲ. ಜನರು ಹಣದುಬ್ಬರವನ್ನು ಎದುರಿಸಬೇಕಾಗಿರಲಿಲ್ಲ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT