ಸಚಿನ್ ಪೈಲಟ್ 
ದೇಶ

ಚುನಾವಣಾ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆ ಮಾಡುವುದು ತಪ್ಪು: ಸಚಿನ್ ಪೈಲಟ್

ಚುನಾವಣಾ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆ ಮಾಡುವುದು ತಪ್ಪು ಎಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಶನಿವಾರ ಹೇಳಿದ್ದಾರೆ.

ನವದೆಹಲಿ: ಚುನಾವಣಾ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆ ಮಾಡುವುದು ತಪ್ಪು ಎಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಶನಿವಾರ ಹೇಳಿದ್ದಾರೆ. 2014ರ ಲೋಕಸಭಾ ಚುನಾವಣಾ ಸೋಲಿಗೆ ರಾಹುಲ್ ಗಾಂಧಿ ಅವರನ್ನು ಗುಲಾಮ್ ನಬಿ ಆಜಾದ್ ದೂಷಿಸಿದ ಬೆನ್ನಲ್ಲೇ, ಸಚಿನ್ ಪೈಲಟ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಹೋರಾಡಲು ಪಕ್ಷ ತಯಾರಿ ನಡೆಸುತ್ತಿರುವಾಗ ಹಾಗೂ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ತನ್ನ ಜವಾಬ್ದಾರಿಯನ್ನು ಪೂರೈಸದಿರುವಾಗ ಆಜಾದ್ ಅವರ ಪತ್ರ ತುಂಬಾ ದುರದೃಷ್ಟಕರ ಎಂದು ಪೈಲಟ್ ಹೇಳಿದ್ದಾರೆ.

ಇದನ್ನೂ ಓದಿ: 'ಭಾರತ ಮತ್ತು ಕಾಂಗ್ರೆಸ್ ನಡುವಿನ ಸಮನ್ವಯದಲ್ಲಿ ಬಿರುಕು, ಆತ್ಮಾವಲೋಕನದ ಅಗತ್ಯವಿತ್ತು': ಮನೀಶ್ ತಿವಾರಿ
 
ಆಜಾದ್ 50 ವರ್ಷಗಳ ಕಾಲ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ ಮತ್ತು ಈಗ, ದೇಶ ಮತ್ತು ಪಕ್ಷವು ಜನರ ಸಮಸ್ಯೆಗಳನ್ನು ಎತ್ತುವ ಅವಶ್ಯಕತೆಯಿರುವಾಗ ಈ ರೀತಿ ಮಾಡಬಾರದಿತ್ತು. 2014ರ ಲೋಕಸಭಾ ಚುನಾವಣಾ ಸೋಲಿಗೆ ಒಬ್ಬ ವ್ಯಕ್ತಿಯನ್ನು ಹೊಣೆಗಾರರನ್ನಾಗಿ ಮಾಡುವುದು ತಪ್ಪು ಎಂದಿದ್ದಾರೆ.

ಆಜಾದ್ ಅವರ ಪತ್ರ ರಾಹುಲ್ ಗಾಂಧಿ ಅವರ ವೈಯಕ್ತಿಕ ನಿಂದನೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಪೈಲಟ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT