ಶಾಸಕರನ್ನು ಕರೆದೊಯ್ಯುತ್ತಿರುವ ಬಸ್ ಗಳು 
ದೇಶ

ಜಾರ್ಖಂಡ್ ರಾಜಕೀಯ ಬಿಕ್ಕಟ್ಟು: ಜೆಎಂಎಂ- ಕಾಂಗ್ರೆಸ್ ಶಾಸಕರ ಸ್ಥಳಾಂತರ

ಜಾರ್ಖಂಡ್ ನಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದ್ದು, ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಅವರ ಮೈತ್ರಿ ಪಕ್ಷ ಕಾಂಗ್ರೆಸ್ ತಮ್ಮ ಶಾಸಕರನ್ನು ಅಪರಿಚಿತ ಸ್ಥಳವೊಂದಕ್ಕೆ ಸ್ಥಳಾಂತರಿಸಿದೆ ಎಂದು ವರದಿಯಾಗಿದೆ.

ರಾಂಚಿ: ಜಾರ್ಖಂಡ್ ನಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದ್ದು, ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಅವರ ಮೈತ್ರಿ ಪಕ್ಷ ಕಾಂಗ್ರೆಸ್ ತಮ್ಮ ಶಾಸಕರನ್ನು ಅಪರಿಚಿತ ಸ್ಥಳವೊಂದಕ್ಕೆ ಸ್ಥಳಾಂತರಿಸಿದೆ ಎಂದು ವರದಿಯಾಗಿದೆ.

ಸಭೆ ನಂತರ ರಾಂಚಿಯಲ್ಲಿರುವ ಸೊರೆನ್ ಅವರ ನಿವಾಸದಿಂದ ಎರಡು ಬಸ್ ಗಳಲ್ಲಿ ಜಾರ್ಖಂಡ್ ಶಾಸಕರನ್ನು ಕರೆದೊಯ್ಯಲಾಗಿದೆ. ಜಾರ್ಖಂಡ್ ನಲ್ಲಿ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಉಭಯ ಪಕ್ಷಗಳು ತಮ್ಮ ಶಾಸಕರನ್ನು ಬೇರೆಡೆಗೆ ಸ್ಥಳಾಂತರಿಸಿವೆ.

ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅನರ್ಹತೆ ಭೀತಿ ಎದುರಿಸುತ್ತಿದ್ದು, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಕೇಂದ್ರ ಚುನಾವಣಾ ಆಯೋಗ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. 

ಬದಲಾದ ರಾಜಕೀಯ ಸನ್ನಿವೇಶದಲ್ಲಿ ಆಡಳಿತರೂಢ ಪಕ್ಷಗಳ ಶಾಸಕರ ಸಂಖ್ಯೆಯನ್ನು ಹಿಡಿದಿಟ್ಟುಕೊಳ್ಳಲು ರೆಸಾರ್ಟ್ ರಾಜಕೀಯ ಅಗತ್ಯವಿದೆ ಎಂದು ಪಕ್ಷದ ಮೂಲಗಳು ಸಮರ್ಥಿಸಿಕೊಂಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT