ಮಲ್ಲಿಕಾರ್ಜುನ ಖರ್ಗೆ 
ದೇಶ

ರಾಹುಲ್ ಗಾಂಧಿಯೇ ಕಾಂಗ್ರೆಸ್ ನಾಯಕತ್ವ ವಹಿಸಬೇಕು, ಅವರಿಂದಲೇ ಪಕ್ಷವನ್ನು ಮೇಲೆತ್ತಲು ಸಾಧ್ಯ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಪಕ್ಷವನ್ನು ಹಾಲಿ ಬಿಕ್ಕಟ್ಟಿನಿಂದ ಮೇಲೆತ್ತುವ ಸಾಮರ್ಥ್ಯ ರಾಹುಲ್ ಗಾಂಧಿಗೆ ಮಾತ್ರ ಇದ್ದು, ಪಕ್ಷದ ನಾಯಕತ್ವವನ್ನು ಅವರೇ ವಹಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ. 

ನವದೆಹಲಿ: ಕಾಂಗ್ರೆಸ್ ಪಕ್ಷವನ್ನು ಹಾಲಿ ಬಿಕ್ಕಟ್ಟಿನಿಂದ ಮೇಲೆತ್ತುವ ಸಾಮರ್ಥ್ಯ ರಾಹುಲ್ ಗಾಂಧಿಗೆ ಮಾತ್ರ ಇದ್ದು, ಪಕ್ಷದ ನಾಯಕತ್ವವನ್ನು ಅವರೇ ವಹಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, 'ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಇಂದು ಇಡೀ ಪರಿಸ್ಥಿತಿ ಸ್ಪಷ್ಟವಾಗಿದೆ. ನನ್ನ ವೈಯಕ್ತಿಕ ಅಭಿಪ್ರಾಯ ಎಂದರೆ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ನೇತೃತ್ವವನ್ನು ವಹಿಸಬೇಕು. ಇದು ಎಲ್ಲಾ ಕಾರ್ಯಕರ್ತರ ಭಾವನೆಯಾಗಿದೆ. ಹಾಲಿ ಇರುವ ಪರಿಸ್ಥಿತಿಯಿಂದ ಪಕ್ಷವನ್ನು ರಾಹುಲ್ ಗಾಂಧಿ ಮಾತ್ರ ಮೇಲಕ್ಕೆತ್ತಬಲ್ಲರು. ಅವರು ಪಕ್ಷವನ್ನು ಒಗ್ಗೂಡಿಸುತ್ತಾರೆ ಮತ್ತು ಬಲಪಡಿಸುತ್ತಾರೆ. ಭಾರತ್ ಜೋಡೋ ಕಾರ್ಯಕ್ರಮದಲ್ಲೂ ಜನರನ್ನು ಒಟ್ಟುಗೂಡಿಸುವ ಸಾಮರ್ಥ್ಯ ಅವರಿಗೆ ಮಾತ್ರ ಇದೆ ಎಂದು ಹೇಳಿದರು. 

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ವೇಳಾಪಟ್ಟಿಯನ್ನು ನಿರ್ಧರಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಭಾನುವಾರ ನಡೆಯಿತು. ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಈ ಸಭೆ ನಡೆಯಿತು. ಸಭೆಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಭಾಗವಹಿಸಿದ್ದರು. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಕೂಡ ವರ್ಚುವಲ್ ಮೋಡ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಇನ್ನು ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

ಪಕ್ಷದ ಹೇಳಿಕೆಯ ಪ್ರಕಾರ, ಸೆಪ್ಟೆಂಬರ್ 22 ರಂದು ಚುನಾವಣಾ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು. ಸೆಪ್ಟೆಂಬರ್ 24 ರಿಂದ ಸೆಪ್ಟೆಂಬರ್ 30 ರ ನಡುವೆ ನಾಮಪತ್ರ ಸಲ್ಲಿಸಬಹುದು. ಅಕ್ಟೋಬರ್‌ನಲ್ಲಿ ಪರಿಶೀಲನೆ ನಡೆಯಲಿದೆ ಮತ್ತು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಅಕ್ಟೋಬರ್ 8 ಆಗಿದೆ. ಅಂತಿಮವಾಗಿ, ಅಕ್ಟೋಬರ್ 19 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಅಂತೆಯೇ ಸೆಪ್ಟೆಂಬರ್ 4 ರಂದು ನವದೆಹಲಿಯಲ್ಲಿ ಮೆಹಂಗೈ ಪರ್ ಹಲ್ಲಾ ಬೋಲ್ ರ್ಯಾಲಿಯನ್ನು ಮತ್ತು ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸಲು ಮತ್ತು ಅದರ ನಂತರ ಅದರ ಮುಂದುವರಿಕೆ ಅದ್ಭುತ ಯಶಸ್ಸನ್ನು ಮಾಡುವ ತನ್ನ ಸಂಕಲ್ಪವನ್ನು CWC ಪುನರುಚ್ಚರಿಸಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

SCROLL FOR NEXT