ಗುಲಾಂ ನಬಿ ಆಜಾದ್ ಅವರೊಂದಿಗೆ ಕಾಂಗ್ರೆಸ್ ತೊರೆದ ಮುಖಂಡರು 
ದೇಶ

ಜಮ್ಮು-ಕಾಶ್ಮೀರ: ಗುಲಾಂ ನಬಿ ಆಜಾದ್ ಬೆಂಬಲಿಸಿ, ಮತ್ತೆ ಮೂವರು ಕಾಂಗ್ರೆಸ್ ಮುಖಂಡರ ರಾಜೀನಾಮೆ

ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಬೆಂಬಲಿಸಿ, ಕೇಂದ್ರಾಡಳಿತ ಪ್ರದೇಶ ಜಮ್ಮು- ಕಾಶ್ಮೀರದ ಉಪ ಸ್ಪೀಕರ್ ಗುಲಾಂ ಹೈದರ್ ಮಲ್ಲಿಕ್ ಸೇರಿದಂತೆ ಮೂವರು ಕಾಂಗ್ರೆಸ್ ಮುಖಂಡರು ಇಂದು ರಾಜೀನಾಮೆ ಸಲ್ಲಿಸಿದ್ದಾರೆ. 

ಜಮ್ಮು-ಕಾಶ್ಮೀರ: ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಬೆಂಬಲಿಸಿ, ಕೇಂದ್ರಾಡಳಿತ ಪ್ರದೇಶ ಜಮ್ಮು- ಕಾಶ್ಮೀರದ ಉಪ ಸ್ಪೀಕರ್ ಗುಲಾಂ ಹೈದರ್ ಮಲ್ಲಿಕ್ ಸೇರಿದಂತೆ ಮೂವರು ಕಾಂಗ್ರೆಸ್ ಮುಖಂಡರು ಇಂದು ರಾಜೀನಾಮೆ ಸಲ್ಲಿಸಿದ್ದಾರೆ. 

ಮಲ್ಲಿಕ್ ಕಥುವಾದ ಬನಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ. ಮಾಜಿ ವಿಧಾನಪರಿಷತ್ ಸದಸ್ಯರಾದ ಸುಭಾಷ್ ಗುಪ್ತಾ ಮತ್ತು ಶ್ಯಾಮ್ ಲಾಲ್ ಭಗತ್ ಅವರು ಪ್ರತ್ಯೇಕವಾಗಿ ಪಕ್ಷದ ಹೈಕಮಾಂಡ್ ಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಈ ಮೂವರ ಬೆಂಬಲದ ಪತ್ರವನ್ನು ಸ್ವೀಕರಿಸಿರುವುದಾಗಿ ಗುಲಾಂ ನಬಿ ಆಜಾದ್ ಅವರ ಆಪ್ತ, ಮಾಜಿ ಸತಿವ ಜಿಎಂ ಸಾರೂರಿ ತಿಳಿಸಿದ್ದಾರೆ.

ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವರಾದ ಅಬ್ದುಲ್ ಮಜಿದ್ ವಾನಿ, ಮನೋಹಲ್ ಲಾಲ್ ಶರ್ಮಾ,  ಗುರು ರಾಮ್,  ಮಾಜಿ ಶಾಸಕ ಬಾಲ್ವಾನ್ ಸಿಂಗ್ ಕೂಡಾ ದೆಹಲಿಯಲ್ಲಿ ಆಜಾದ್ ಅವರನ್ನು ಭೇಟಿ ಮಾಡಿದ್ದು, ನಾಳೆ  ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಮಾಜಿ ಸಚಿವರು, ಶಾಸಕರು ಸೇರಿದಂತೆ ಸುಮಾರು ಒಂದು ಡಜನ್ ನಷ್ಟು ಕಾಂಗ್ರೆಸ್ ಮುಖಂಡರು ಅಲ್ಲದೇ, ನೂರಾರು ಪಂಚಾಯಿತಿ ಸದಸ್ಯರು, ಮುನ್ಸಿಪಲ್ ಕಾರ್ಪೋರೇಟರ್, ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ಮುಖಂಡರು ಈಗಾಗಲೇ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಆಜಾದ್ ಬಣ ಸೇರಿದ್ದಾರೆ. ಜಮ್ಮು -ಕಾಶ್ನೀರದಿಂದ ಶೀಘ್ರದಲ್ಲೇ ರಾಷ್ಟ್ರಮಟ್ಟದ ಪಕ್ಷವೊಂದು ಉದಯವಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT