ಯುವಕನ ಶವ ಕಂಡುಬಂದ ಕಬ್ಬಿನ ಗದ್ದೆ (ಚಿತ್ರ-ಎಎನ್‌ಐ) 
ದೇಶ

ಅಂತರ್‌ಧರ್ಮೀಯ ಸಂಬಂಧ: 18 ವರ್ಷದ ಯುವಕ, ಬಾಲಕಿಯನ್ನು ಕೊಂದ ಕುಟುಂಬಸ್ಥರು

ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಅಂತರ್‌ಧರ್ಮೀಯ ಸಂಬಂಧದ ಕಾರಣದ ಶಂಕಿತ ಕೊಲೆ ಪ್ರಕರಣವೊಂದರಲ್ಲಿ 18 ವರ್ಷದ ಯುವಕ ಮತ್ತು ಬಾಲಕಿಯನ್ನು ಆಕ್ಷೇಪಾರ್ಹ ರೀತಿಯಲ್ಲಿ ಕಂಡು ಕುಟುಂಬಸ್ಥರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಬಸ್ತಿ: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಅಂತರ್‌ಧರ್ಮೀಯ ಸಂಬಂಧದ ಕಾರಣದ ಶಂಕಿತ ಕೊಲೆ ಪ್ರಕರಣವೊಂದರಲ್ಲಿ 18 ವರ್ಷದ ಯುವಕ ಮತ್ತು ಬಾಲಕಿಯನ್ನು ಆಕ್ಷೇಪಾರ್ಹ ರೀತಿಯಲ್ಲಿ ಕಂಡು ಕುಟುಂಬಸ್ಥರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ರುಧೌಲಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ದಂಪತಿಯನ್ನು ಕೊಂದ ಬಾಲಕಿ ಮನೆಯವರು, ಆಕೆಯ ಶವವನ್ನು ಹೂತು ಹಾಕಿದ್ದು, ಯುವಕನ ಶವವನ್ನು ಸಮೀಪದ ಕಬ್ಬಿನ ಗದ್ದೆಗೆ ಎಸೆದಿದ್ದಾರೆ.

ಬಾಲಕಿಯ ಶವವನ್ನು ಸಮಾಧಿಯಿಂದ ಹೊರತೆಗೆಯುವ ಪ್ರಕ್ರಿಯೆ ಆರಂಭವಾಗಿದ್ದು, ಎರಡೂ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ದೀಪೇಂದ್ರ ಚೌಧರಿ ತಿಳಿಸಿದ್ದಾರೆ.

'ಪೊಲೀಸರನ್ನು ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ ಮತ್ತು ಈ ವಿಚಾರದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಶೀಘ್ರದಲ್ಲೇ ಅಪರಾಧಿಗಳನ್ನು ಹಿಡಿಯಲಾಗುವುದು' ಎಂದು ಹೇಳಿದ್ದಾರೆ.

ಪರಾಸ್ ನಾಥ್ ಚೌಧರಿ ಎಂಬ ರೈತ ತನ್ನ ಕಬ್ಬಿನ ಗದ್ದೆಯಲ್ಲಿ ಯುವಕನ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದಾಗ ವಿಷಯ ಬೆಳಕಿಗೆ ಬಂದಿದೆ. ರುಧೌಲಿ ಪೊಲೀಸ್ ಠಾಣೆ ಪ್ರಭಾರಿ ಇನ್ಸ್‌ಪೆಕ್ಟರ್ ರಾಮಕೃಷ್ಣ ಮಿಶ್ರಾ ಅವರು ಘಟನಾ ಸ್ಥಳಕ್ಕೆ ತೆರಳಿ ತನಿಖೆ ಆರಂಭಿಸಿದ್ದಾರೆ.

ಪ್ರಾಥಮಿಕ ತನಿಖೆ ಪ್ರಕಾರ, ಯುವಕನ ದೇಹದ ಮೇಲೆ ಹಲವಾರು ಗಾಯದ ಗುರುತುಗಳು ಕಂಡುಬಂದಿವೆ. ಮೃತ ದೇಹ ಪತ್ತೆಯಾದಾಗ, ಎಲ್ಲಾ ಗುಂಡಿಗಳನ್ನು ತೆರೆದಿರುವ ಹಸಿರು ಶರ್ಟ್ ಧರಿಸಿದ್ದರು ಮತ್ತು ಅವರ ಪ್ಯಾಂಟ್ ಕಾಲಿನ ಕೆಳಗೆ ಜಾರಿತ್ತು.

ರಾತ್ರಿ ಮನೆಯಿಂದ ಹೋದ ಯುವಕ ವಾಪಸ್ ಬಾರದೆ, ಫೋನ್ ಸ್ವಿಚ್ ಆಫ್ ಆಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ.

ಪೊಲೀಸರು ಸೋದರನ ಮನೆಗೆ ತಲುಪಿದಾಗ ಅವನ ಸಹೋದರಿಯನ್ನು ಕೂಡ ಹಿಂದಿನ ರಾತ್ರಿ ಸಾಯಿಸಿ, ಸಮಾಧಿ ಮಾಡಲಾಗಿತ್ತು.

'ರಾತ್ರಿ ವೇಳೆ ನಿಗೂಢವಾಗಿ ಬಾಲಕಿಯನ್ನು ಸಮಾಧಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬಾಲಕಿಯ ಕುಟುಂಬದವರು ಮರ್ಯಾದಾ ಹತ್ಯೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ನಾವು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಚೌಧರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT