ಗಣೇಶ ಮೆರವಣಿಗೆ (ಸಂಗ್ರಹ ಚಿತ್ರ) 
ದೇಶ

ವಡೋದರಾ: ಗಣೇಶ ಮೆರವಣಿಗೆ ವೇಳೆ ಕೋಮು ಸಂಘರ್ಷ

ಗಣೇಶ ಹಬ್ಬದ ಸಂದರ್ಭದಲ್ಲಿ ಸಡಗರ ಇರಬೇಕಾದ ಬದಲು ಕೋಮು ಸಂಘರ್ಷದ ಘಟನೆ ಗುಜರಾತ್ ನ ವಡೋದರ ನಗರದಲ್ಲಿ ವರದಿಯಾಗಿದೆ.

ವಡೋದರ: ಗಣೇಶ ಹಬ್ಬದ ಸಂದರ್ಭದಲ್ಲಿ ಸಡಗರ ಇರಬೇಕಾದ ಬದಲು ಕೋಮು ಸಂಘರ್ಷದ ಘಟನೆ ಗುಜರಾತ್ ನ ವಡೋದರ ನಗರದಲ್ಲಿ ವರದಿಯಾಗಿದೆ.

ಗಣೇಶ ಮೆರವಣಿಗೆ ವೇಳೆ, ಎರಡು ಸಮುದಾಯದ ಸದಸ್ಯರ ನಡುವೆ ಸಂಘರ್ಷ ಉಂಟಾಗಿದ್ದು, ಪರಸ್ಪರ ಕಲ್ಲು ತೂರಾಟ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ 13 ಮಂದಿಯನ್ನು ಪೊಲೀಸರು ಈ ವರೆಗೂ ಬಂಧಿಸಿದು, ಉಭಯ ಸಮುದಾಯಗಳ ಸದಸ್ಯರ ವಿರುದ್ಧ ಗಲಭೆ ಮತ್ತು ಕಾನೂನುಬಾಹಿರ ಸಭೆ ಆರೋಪದ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ಮಾಂಡ್ವಿ ಪ್ರದೇಶದಲ್ಲಿ ಬೆಳಿಗ್ಗೆ 11:15 ರ ವೇಳೆಗೆ  ಪಾನಿಗೇಟ್ ದರ್ವಾಜಾ ಬಳಿ ಮೆರವಣಿಗೆ ತೆರಳುತ್ತಿದ್ದಾಗ, ವಾಗ್ವಾದದಲ್ಲಿ ಆರಂಭಗೊಂಡ ಈ ಕಹಿ ಘಟನೆ ವಿಕೋಪಕ್ಕೆ ತಿರುಗಿ ಕೋಮು ಸಂಘರ್ಷದ ರೂಪ ಪಡೆದುಕೊಂಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕಾನೂನು ಸುವ್ಯವಸ್ಥೆಗಾಗಿ ಘಟನಾ ಸ್ಥಳದಲ್ಲಿ ಪೊಲೀಸ್ ಪಡೆಯ ನಿಯೋಜನೆಯನ್ನು ಹೆಚ್ಚಿಸಲಾಗಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಂಟಿ ಆಯುಕ್ತ ಚಿರಾಗ್ ಕೊರಾಡಿಯಾ ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT