ಗಣೇಶ ಮೆರವಣಿಗೆ (ಸಂಗ್ರಹ ಚಿತ್ರ) 
ದೇಶ

ವಡೋದರಾ: ಗಣೇಶ ಮೆರವಣಿಗೆ ವೇಳೆ ಕೋಮು ಸಂಘರ್ಷ

ಗಣೇಶ ಹಬ್ಬದ ಸಂದರ್ಭದಲ್ಲಿ ಸಡಗರ ಇರಬೇಕಾದ ಬದಲು ಕೋಮು ಸಂಘರ್ಷದ ಘಟನೆ ಗುಜರಾತ್ ನ ವಡೋದರ ನಗರದಲ್ಲಿ ವರದಿಯಾಗಿದೆ.

ವಡೋದರ: ಗಣೇಶ ಹಬ್ಬದ ಸಂದರ್ಭದಲ್ಲಿ ಸಡಗರ ಇರಬೇಕಾದ ಬದಲು ಕೋಮು ಸಂಘರ್ಷದ ಘಟನೆ ಗುಜರಾತ್ ನ ವಡೋದರ ನಗರದಲ್ಲಿ ವರದಿಯಾಗಿದೆ.

ಗಣೇಶ ಮೆರವಣಿಗೆ ವೇಳೆ, ಎರಡು ಸಮುದಾಯದ ಸದಸ್ಯರ ನಡುವೆ ಸಂಘರ್ಷ ಉಂಟಾಗಿದ್ದು, ಪರಸ್ಪರ ಕಲ್ಲು ತೂರಾಟ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ 13 ಮಂದಿಯನ್ನು ಪೊಲೀಸರು ಈ ವರೆಗೂ ಬಂಧಿಸಿದು, ಉಭಯ ಸಮುದಾಯಗಳ ಸದಸ್ಯರ ವಿರುದ್ಧ ಗಲಭೆ ಮತ್ತು ಕಾನೂನುಬಾಹಿರ ಸಭೆ ಆರೋಪದ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ಮಾಂಡ್ವಿ ಪ್ರದೇಶದಲ್ಲಿ ಬೆಳಿಗ್ಗೆ 11:15 ರ ವೇಳೆಗೆ  ಪಾನಿಗೇಟ್ ದರ್ವಾಜಾ ಬಳಿ ಮೆರವಣಿಗೆ ತೆರಳುತ್ತಿದ್ದಾಗ, ವಾಗ್ವಾದದಲ್ಲಿ ಆರಂಭಗೊಂಡ ಈ ಕಹಿ ಘಟನೆ ವಿಕೋಪಕ್ಕೆ ತಿರುಗಿ ಕೋಮು ಸಂಘರ್ಷದ ರೂಪ ಪಡೆದುಕೊಂಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕಾನೂನು ಸುವ್ಯವಸ್ಥೆಗಾಗಿ ಘಟನಾ ಸ್ಥಳದಲ್ಲಿ ಪೊಲೀಸ್ ಪಡೆಯ ನಿಯೋಜನೆಯನ್ನು ಹೆಚ್ಚಿಸಲಾಗಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಜಂಟಿ ಆಯುಕ್ತ ಚಿರಾಗ್ ಕೊರಾಡಿಯಾ ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT