ಸಾಂದರ್ಭಿಕ ಚಿತ್ರ 
ದೇಶ

ಶೋಪಿಯಾನ್ ಎನ್ಕೌಂಟರ್: 3 ಎಲ್ ಇಟಿ ಉಗ್ರರು ಹತ, ಶೋಧ ಕಾರ್ಯಾಚರಣೆ ಮುಂದುವರಿಕೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನೆ ಬುಧವಾರ ಮೂರು ಉಗ್ರರನ್ನು ಹೊಡೆದುರುಳಿಸಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನೆ ಬುಧವಾರ ಮೂರು ಉಗ್ರರನ್ನು ಹೊಡೆದುರುಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದ ಎನ್ಕೌಂಟರ್ ನಲ್ಲಿ ಸೇನೆ ಪಾಕಿಸ್ತಾನದ ನಿಷೇಧಿತ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಮೂರು ಉಗ್ರರನ್ನು ಹೊಡೆದುರುಳಿಸಿದೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ನಾಗ್ಬಾಲ್ ಪ್ರಾಂತ್ಯದಲ್ಲಿ ಉಗ್ರರ ಇರುವಿಕೆ ಕುರಿತು ಮಾಹಿತಿ ಪಡೆದ ಸೇನೆ ಕೂಡಲೇ ಆ ಪ್ರದೇಶವನ್ನು ಸುತ್ತುವರೆಯಿತು. ಅಲ್ಲದೆ ಘಟನಾ ಪ್ರದೇಶದ ಸಂಪರ್ಕಿತ ರಸ್ತೆಗಳಲ್ಲಿ ನಾಕಾಬಂದಿ ಹಾಕಿ ಉಗ್ರರು ತಪ್ಪಿಸಿಕೊಳ್ಳದಂತೆ ಮಾಡಿ ಕಾರ್ಯಾಚರಣೆ ಆರಂಭಿಸಿತು.

ಸೇನೆ ಸುತ್ತುವರೆಯುತ್ತಿದ್ದಂತೆಯೇ ಎಚ್ಚೆತ್ತ ಉಗ್ರರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದು, ಈ ವೇಳೆ ಪ್ರತಿದಾಳಿ ನಡೆಸಿದ್ದ ಸೇನೆ ಇಂದು ಬೆಳಗ್ಗೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿತ್ತು. ಬಳಿಕವೂ ಕಾರ್ಯಾಚರಣೆ ಮುಂದುವರೆದು ಇಂದು ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಿತು. ಆ ಮೂಲಕ ಶೋಪಿಯಾನ್ ಎನ್ಕೌಂಟರ್ ನಲ್ಲಿ ಒಟ್ಟಾರೆ ಮೂರು ಉಗ್ರರನ್ನು ಹೊಡೆದುರುಳಿಸಿದೆ. ಮೃತ ಉಗ್ರರೆಲ್ಲರೂ ಪಾಕಿಸ್ತಾನದ ನಿಷೇಧಿತ ಉಗ್ರ ಸಂಘಟನೆ ಲಷ್ಕರ್ ಇ ತೊಯ್ಬಾಗೆ ಸೇರಿದವರು ಎನ್ನಲಾಗಿದೆ.

ಪ್ರಸ್ತುತ ನಾಗ್ಬಾಲ್ ಪ್ರದೇಶದಲ್ಲಿ ಕಾರ್ಯಾಚರಣೆ ಮತ್ತು ಶೋಧ ಕಾರ್ಯ ಮುಂದುವರೆದಿದೆ ಎಂದು ಸೇನೆ ಮಾಹಿತಿ ನೀಡಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!