ಸಾಂದರ್ಭಿಕ ಚಿತ್ರ 
ದೇಶ

ಶೋಪಿಯಾನ್ ಎನ್ಕೌಂಟರ್: 3 ಎಲ್ ಇಟಿ ಉಗ್ರರು ಹತ, ಶೋಧ ಕಾರ್ಯಾಚರಣೆ ಮುಂದುವರಿಕೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನೆ ಬುಧವಾರ ಮೂರು ಉಗ್ರರನ್ನು ಹೊಡೆದುರುಳಿಸಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಭಾರತೀಯ ಸೇನೆ ಬುಧವಾರ ಮೂರು ಉಗ್ರರನ್ನು ಹೊಡೆದುರುಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದ ಎನ್ಕೌಂಟರ್ ನಲ್ಲಿ ಸೇನೆ ಪಾಕಿಸ್ತಾನದ ನಿಷೇಧಿತ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಮೂರು ಉಗ್ರರನ್ನು ಹೊಡೆದುರುಳಿಸಿದೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ನಾಗ್ಬಾಲ್ ಪ್ರಾಂತ್ಯದಲ್ಲಿ ಉಗ್ರರ ಇರುವಿಕೆ ಕುರಿತು ಮಾಹಿತಿ ಪಡೆದ ಸೇನೆ ಕೂಡಲೇ ಆ ಪ್ರದೇಶವನ್ನು ಸುತ್ತುವರೆಯಿತು. ಅಲ್ಲದೆ ಘಟನಾ ಪ್ರದೇಶದ ಸಂಪರ್ಕಿತ ರಸ್ತೆಗಳಲ್ಲಿ ನಾಕಾಬಂದಿ ಹಾಕಿ ಉಗ್ರರು ತಪ್ಪಿಸಿಕೊಳ್ಳದಂತೆ ಮಾಡಿ ಕಾರ್ಯಾಚರಣೆ ಆರಂಭಿಸಿತು.

ಸೇನೆ ಸುತ್ತುವರೆಯುತ್ತಿದ್ದಂತೆಯೇ ಎಚ್ಚೆತ್ತ ಉಗ್ರರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದು, ಈ ವೇಳೆ ಪ್ರತಿದಾಳಿ ನಡೆಸಿದ್ದ ಸೇನೆ ಇಂದು ಬೆಳಗ್ಗೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿತ್ತು. ಬಳಿಕವೂ ಕಾರ್ಯಾಚರಣೆ ಮುಂದುವರೆದು ಇಂದು ಮತ್ತೋರ್ವ ಉಗ್ರನನ್ನು ಹೊಡೆದುರುಳಿಸಿತು. ಆ ಮೂಲಕ ಶೋಪಿಯಾನ್ ಎನ್ಕೌಂಟರ್ ನಲ್ಲಿ ಒಟ್ಟಾರೆ ಮೂರು ಉಗ್ರರನ್ನು ಹೊಡೆದುರುಳಿಸಿದೆ. ಮೃತ ಉಗ್ರರೆಲ್ಲರೂ ಪಾಕಿಸ್ತಾನದ ನಿಷೇಧಿತ ಉಗ್ರ ಸಂಘಟನೆ ಲಷ್ಕರ್ ಇ ತೊಯ್ಬಾಗೆ ಸೇರಿದವರು ಎನ್ನಲಾಗಿದೆ.

ಪ್ರಸ್ತುತ ನಾಗ್ಬಾಲ್ ಪ್ರದೇಶದಲ್ಲಿ ಕಾರ್ಯಾಚರಣೆ ಮತ್ತು ಶೋಧ ಕಾರ್ಯ ಮುಂದುವರೆದಿದೆ ಎಂದು ಸೇನೆ ಮಾಹಿತಿ ನೀಡಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT