ಆಮ್ ಆದ್ಮಿ ಪಕ್ಷ 
ದೇಶ

ಸಿಬಿಐ ನಿರ್ದೇಶಕರನ್ನು ಭೇಟಿ ಮಾಡಲಿರುವ ಆಮ್ ಆದ್ಮಿ ಪಕ್ಷದ ಶಾಸಕರು; ಆಪರೇಷನ್ ಲೋಟಸ್ ಬಗ್ಗೆ ತನಿಖೆಗೆ ಆಗ್ರಹ 

ಆಮ್ ಆದ್ಮಿ ಪಕ್ಷದ ಶಾಸಕರು ದೆಹಲಿಯಲ್ಲಿ ಸಿಬಿಐ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದು, ಆಪರೇಷನ್ ಲೋಟಸ್ ಬಗ್ಗೆ ತನಿಖೆಗೆ ಆಗ್ರಹಿಸಲಿದ್ದಾರೆ.

ನವದೆಹಲಿ: ಆಮ್ ಆದ್ಮಿ ಪಕ್ಷದ ಶಾಸಕರು ದೆಹಲಿಯಲ್ಲಿ ಸಿಬಿಐ ಮುಖ್ಯಸ್ಥರನ್ನು ಭೇಟಿ ಮಾಡಲಿದ್ದು, ಆಪರೇಷನ್ ಲೋಟಸ್ ಬಗ್ಗೆ ತನಿಖೆಗೆ ಆಗ್ರಹಿಸಲಿದ್ದಾರೆ.

ರಾಜ್ಯಗಳಲ್ಲಿ ವಿಪಕ್ಷಗಳು ನಡೆಸುತ್ತಿರುವ ಸರ್ಕಾರಗಳನ್ನು ಉರುಳಿಸುವುದಕ್ಕೆ ಬಿಜೆಪಿ ಆಪರೇಷನ್ ಲೋಟಸ್ ಕಾರ್ಯಾಚರಣೆ ನಡೆಸುತ್ತಿದೆ ಈ ಬಗ್ಗೆ ತನಿಖೆ ನಡೆಸಲು ಆಗ್ರಹಿಸಲಿದ್ದೇವೆ ಎಂದು ಪಕ್ಷದ ನಾಯಕ ಅತಿಶಿ ಹೇಳಿದ್ದಾರೆ. 

ಆಮ್ ಆದ್ಮಿ ಪಕ್ಷದ 10 ಶಾಸಕರು ಮಧ್ಯಾಹ್ನ 3 ಗಂಟೆಗೆ ಸಿಬಿಐ ನಿರ್ದೇಶಕರನ್ನು ಭೇಟಿ ಮಾಡಲಿದ್ದಾರೆ. ದೆಹಲಿಯಲ್ಲೂ ಬಿಜೆಪಿ ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದೆ, 40 ಶಾಸಕರಿಗೆ ಬಿಜೆಪಿ ಗಾಳ ಹಾಕುತ್ತಿದ್ದು, ಪ್ರತಿಯೊಬ್ಬರಿಗೂ 20 ಕೋಟಿ ರೂಪಾಯಿ, ಆಮಿಷವೊಡ್ಡಿದ್ದಾರೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. 

ಬಿಜೆಪಿ ಯಾವುದೇ ವಿಧಾನಸಭೆಯಲ್ಲಿ ಸೋತರೆ, ಆಪರೇಷನ್ ಲೋಟಸ್ ನ್ನು ಪ್ರಾರಂಭಿಸುತ್ತದೆ. ವಿಪಕ್ಷಗಳ ಸರ್ಕಾರವನ್ನು ಉರುಳಿಸಲು ಸಿಬಿಐ ಹಾಗೂ ಇಡಿಯನ್ನು ಬಳಸಿಕೊಳ್ಳುತ್ತದೆ ಎಂದು ಅತಿಶಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT