ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ 
ದೇಶ

ಶಾಲಾ ಶಿಕ್ಷಕರ ನೇಮಕಾತಿ ಹಗರಣ: ಪಾರ್ಥ ಚಟರ್ಜಿ, ಅರ್ಪಿತಾ ಮುಖರ್ಜಿ ನ್ಯಾಯಾಂಗ ಬಂಧನ ವಿಸ್ತರಣೆ

ಶಾಲಾ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ತೃಣಮೂಲಕ ಕಾಂಗ್ರೆಸ್ ಮುಖಂಡ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಕೋಲ್ಕತಾ: ಶಾಲಾ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ತೃಣಮೂಲಕ ಕಾಂಗ್ರೆಸ್ ಮುಖಂಡ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಶಾಲಾ ಸೇವಾ ಆಯೋಗದ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಅವರ ನ್ಯಾಯಾಂಗ ಬಂಧನವನ್ನು ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಬುಧವಾರ ಸೆಪ್ಟೆಂಬರ್ 14 ರವರೆಗೆ ವಿಸ್ತರಿಸಿದೆ.

ಕೋಲ್ಕತ್ತಾದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ನ್ಯಾಯಾಲಯವು ಈ ಹಿಂದೆ ಆಗಸ್ಟ್ 31 ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿತ್ತು. ಇದೀಗ ಮತ್ತೆ ಸೆಪ್ಟೆಂಬರ್ 14 ರವರೆಗೆ ವಿಸ್ತರಿಸಿದೆ.

ಏನಿದು ಪ್ರಕರಣ?
ಪಾರ್ಥ ಚಟರ್ಜಿ ಮತ್ತುು ಅರ್ಪಿತಾ ಮುಖರ್ಜಿ ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಅಕ್ರಮ ನೇಮಕಾತಿಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜುಲೈ 23 ರಂದು ಬಂಧನಕ್ಕೊಳಗಾಗಿದ್ದರು. ಪಾರ್ಥ ಚಟರ್ಜಿ ಅವರ ಒಡೆತನದ ಫ್ಲಾಟ್ ಗಳಿಂದ 49.8 ಕೋಟಿ ರೂ. ನಗದು, ಅಪಾರ ಪ್ರಮಾಣದ ಚಿನ್ನಾಭರಣ, ಆಸ್ತಿಗಳ ದಾಖಲೆಗಳು ಮತ್ತಿಬ್ಬರು ಆರೋಪಿಗಳು ಹೊಂದಿರುವ ಕಂಪನಿಯ ಜಂಟಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಹೇಳಿಕೊಂಡಿದೆ.

ಪಾರ್ಥ ಚಟರ್ಜಿ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಚಿವ ಸ್ಥಾನದಿಂದ ಕಿತ್ತೆಸೆದಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಅವರು ಹೊಂದಿದ್ದ ಎಲ್ಲಾ ಹುದ್ದೆಗಳಿಂದ ತೆರವು ಮಾಡಲಾಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel