ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ 
ದೇಶ

ಶಾಲಾ ಶಿಕ್ಷಕರ ನೇಮಕಾತಿ ಹಗರಣ: ಪಾರ್ಥ ಚಟರ್ಜಿ, ಅರ್ಪಿತಾ ಮುಖರ್ಜಿ ನ್ಯಾಯಾಂಗ ಬಂಧನ ವಿಸ್ತರಣೆ

ಶಾಲಾ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ತೃಣಮೂಲಕ ಕಾಂಗ್ರೆಸ್ ಮುಖಂಡ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಕೋಲ್ಕತಾ: ಶಾಲಾ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ತೃಣಮೂಲಕ ಕಾಂಗ್ರೆಸ್ ಮುಖಂಡ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಶಾಲಾ ಸೇವಾ ಆಯೋಗದ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಅವರ ನ್ಯಾಯಾಂಗ ಬಂಧನವನ್ನು ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಬುಧವಾರ ಸೆಪ್ಟೆಂಬರ್ 14 ರವರೆಗೆ ವಿಸ್ತರಿಸಿದೆ.

ಕೋಲ್ಕತ್ತಾದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ನ್ಯಾಯಾಲಯವು ಈ ಹಿಂದೆ ಆಗಸ್ಟ್ 31 ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿತ್ತು. ಇದೀಗ ಮತ್ತೆ ಸೆಪ್ಟೆಂಬರ್ 14 ರವರೆಗೆ ವಿಸ್ತರಿಸಿದೆ.

ಏನಿದು ಪ್ರಕರಣ?
ಪಾರ್ಥ ಚಟರ್ಜಿ ಮತ್ತುು ಅರ್ಪಿತಾ ಮುಖರ್ಜಿ ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಅಕ್ರಮ ನೇಮಕಾತಿಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜುಲೈ 23 ರಂದು ಬಂಧನಕ್ಕೊಳಗಾಗಿದ್ದರು. ಪಾರ್ಥ ಚಟರ್ಜಿ ಅವರ ಒಡೆತನದ ಫ್ಲಾಟ್ ಗಳಿಂದ 49.8 ಕೋಟಿ ರೂ. ನಗದು, ಅಪಾರ ಪ್ರಮಾಣದ ಚಿನ್ನಾಭರಣ, ಆಸ್ತಿಗಳ ದಾಖಲೆಗಳು ಮತ್ತಿಬ್ಬರು ಆರೋಪಿಗಳು ಹೊಂದಿರುವ ಕಂಪನಿಯ ಜಂಟಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಹೇಳಿಕೊಂಡಿದೆ.

ಪಾರ್ಥ ಚಟರ್ಜಿ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಚಿವ ಸ್ಥಾನದಿಂದ ಕಿತ್ತೆಸೆದಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಅವರು ಹೊಂದಿದ್ದ ಎಲ್ಲಾ ಹುದ್ದೆಗಳಿಂದ ತೆರವು ಮಾಡಲಾಗಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT