ಕೆಸಿಆರ್ - ನಿತೀಶ್ ಕುಮಾರ್ 
ದೇಶ

ಬಿಹಾರ ಸಿಎಂ ನಿತೀಶ್ ಕುಮಾರ್ ಭೇಟಿ ಬಳಿಕ 'ಬಿಜೆಪಿ ಮುಕ್ತ ಭಾರತ'ಕ್ಕೆ ಕೆಸಿಆರ್ ಕರೆ

ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು, “ಬಿಜೆಪಿ ಮುಕ್ತ ಭಾರತ”ಕ್ಕೆ ಬುಧವಾರ ಕರೆ ನೀಡಿದ್ದಾರೆ.

ಪಾಟ್ನಾ: ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು, “ಬಿಜೆಪಿ ಮುಕ್ತ ಭಾರತ”ಕ್ಕೆ ಬುಧವಾರ ಕರೆ ನೀಡಿದ್ದಾರೆ.

"ತಾವು ಬಡೆ ಭಾಯ್"(ದೊಡ್ಡ ಸಹೋದರ) ಎಂದು ಪ್ರೀತಿಯಿಂದ ಕರೆಯುವ ನಿತೀಶ್ ಕುಮಾರ್ ಅವರ ಸಮ್ಮುಖದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೆಸಿಆರ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದಲ್ಲಿ ಅನೇಕ ದುಷ್ಪರಿಣಾಮಗಳಿಗೆ ಕಾರಣವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಈ ವೇಳೆ 2024ರ ಲೋಕಸಭೆ ಚುನಾವಣೆಗೆ  ಪ್ರತಿಪಕ್ಷಗಳನ್ನು ಯಾರು ಮುನ್ನಡೆಸುತ್ತಾರೆ ಮತ್ತು ಕಾಂಗ್ರೆಸ್ ಪಕ್ಷವನ್ನು ಜತೆಗೆ ಸೇರಿಸಲಾಗುತ್ತಿದೆಯೇ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಟಿಆರ್ ಎಸ್ ಮುಖ್ಯಸ್ಥ, ಈ ಕುರಿತು ಸೂಕ್ತ ಸಮಯದಲ್ಲಿ ನಿರ್ಧರಿಸಲಾಗುತ್ತದೆ. ನಮಗೆ ಯಾವುದೇ ಆತುರವಿಲ್ಲ ಎಂದು ಹೇಳಿದರು.

"ಯಾವುದೇ ವಿರೋಧ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸದೆ" ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ "ಅಗ್ನಿಪಥ್" ಯೋಜನೆಯನ್ನು ತಂದಿದ್ದಕ್ಕಾಗಿ ಕೆಸಿಆರ್ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ರೂಪಾಯಿ ಮೌಲ್ಯ ಕುಸಿತ, ರೈತರ ಪ್ರತಿಭಟನೆ, ನಿರುದ್ಯೋಗ ಮತ್ತು ಬೆಲೆ ಏರಿಕೆ ಕುರಿತು ನಿತೀಶ್ ಕುಮಾರ್ ಹಾಗೂ ಕೆಸಿಆರ್ ಇಬ್ಬರು ನಾಯಕರು ಕೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮೋದಿ ಸರ್ಕಾರದ ಅತಿಯಾದ ಪ್ರಚಾರ-ಪ್ರಸಾರವನ್ನು ಟೀಕಿಸಿದ ಬಿಹಾರ ಸಿಎಂ, ರಾಜ್ಯಗಳ ಅಗತ್ಯಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸಂವೇದನೆಯ ಕೊರತೆ ಇದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT