ಹಂತಕ ಅಫ್ರಾಬ್ 
ದೇಶ

ಶ್ರದ್ಧಾ ವಾಕರ್ ಹತ್ಯೆ ಕೇಸ್: ಅಫ್ತಾಬ್ ಮಂಪರು ಪರೀಕ್ಷೆ ಯಶಸ್ವಿ- ಅಧಿಕಾರಿಗಳು

ದೇಶಾದ್ಯಂತ ತೀವ್ರ ಆಕ್ರೋಶ ಹಾಗೂ ಆತಂಕಕ್ಕೆ ಕಾರಣವಾಗಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಹಂತಕ ಅಫ್ತಾಬ್ ಅಮಿತ್ ಪೂನಾವಾಲನಿಗೆ ಇಂದು ಮಂಪರು  (ನಾರ್ಕೋ) ಪರೀಕ್ಷೆ ನಡೆಸಲಾಗಿದೆ.

ನವದೆಹಲಿ: ದೇಶಾದ್ಯಂತ ತೀವ್ರ ಆಕ್ರೋಶ ಹಾಗೂ ಆತಂಕಕ್ಕೆ ಕಾರಣವಾಗಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಹಂತಕ ಅಫ್ತಾಬ್ ಅಮಿತ್ ಪೂನಾವಾಲನಿಗೆ ಇಂದು ಮಂಪರು  (ನಾರ್ಕೋ) ಪರೀಕ್ಷೆ ನಡೆಸಲಾಗಿದೆ. ತನಿಖೆ ಭಾಗವಾಗಿ ರೋಹಿಣಿ ಆಸ್ಪತ್ರೆಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ಪರೀಕ್ಷೆ ನಡೆಸಲಾಗಿದೆ. ಅಫ್ತಾಬ್ ನ ಮಂಪರು  ಪರೀಕ್ಷೆಯಾಗಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಆತನ ಆರೋಗ್ಯದ ಪರಿಸ್ಥಿತಿ ಉತ್ತಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ರೋಹಿಣಿಯಲ್ಲಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಆಸ್ಪತ್ರೆಗೆ ಬೆಳಗ್ಗೆ 8-40ಕ್ಕೆ ಅಫ್ತಾಬ್ ನನ್ನು ಕರೆದೊಯ್ಯಲಾಯಿತು. ನಂತರ ಸುಮಾರು 10 ಗಂಟೆಗೆ ಮಂಪರು ಪರೀಕ್ಷೆ ಆರಂಭಿಸಲಾಯಿತು.  ಪರೀಕ್ಷೆ ನಂತರ ಆತನ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ. 

ಪರೀಕ್ಷೆಗೂ ಮುನ್ನ ರಕ್ತದೊತ್ತಡ, ದೇಶದ ಉಷ್ಣಾಂಶ, ಹೃದಯದ ಬಡಿತವನ್ನು ಪರೀಕ್ಷಿಸಲಾಯಿತು. ಆತನಿಂದ ಸಹಿ ಪಡೆದ ನಂತರ ಮಂಪರು ಪರೀಕ್ಷೆ ಪ್ರಕ್ರಿಯೆ ಪ್ರಾರಂಭಿಸಲಾಯಿತು. ಇದರಲ್ಲಿ ವ್ಯಕ್ತಿ ಮಾದಕ ವಸ್ತು  ಸೇವನೆ ಮಾಡಿದ್ನಾ ಎಂಬುದನ್ನು ಪತ್ತೆ ಹಚ್ಚಲಾಗುತ್ತದೆ.  

ಬುಧವಾರ ರೋಹಿಣಿಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಎಫ್‌ಎಸ್‌ಎಲ್) ನಡೆಸಿದ ಪಾಲಿಗ್ರಾಫ್ ಪರೀಕ್ಷೆಯಲ್ಲಿ ಪೂನಾವಾಲಾ ಅಪರಾಧ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಶ್ರದ್ಧಾ ವಾಕರ್‌ಳನ್ನು ಕೊಂದು ಆಕೆಯ ದೇಹದ ಭಾಗಗಳನ್ನು ಹಲವು ಪ್ರದೇಶಗಳಲ್ಲಿ ವಿಲೇವಾರಿ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ತನ್ನ ಲಿವ್-ಇನ್ ರಿಲೇಶನ್ ಶಿಫ್ ನಲ್ಲಿದ್ದ ಶ್ರದ್ಧಾ ವಾಕರ್ ಅವರನ್ನು 35 ತುಂಡುಗಳನ್ನಾಗಿ ಮಾಡಿ ಅನೇಕ ದಿನಗಳ ವರೆಗೂ ತನ್ನ ನಿವಾಸದಲ್ಲಿ ಫ್ರಿಡ್ಜ್ ನಲ್ಲಿಟ್ಟು ಒಂದೊಂದಾಗಿಯೇ ಮೃತದೇಹ ವಿಲೇವಾರಿ ಸಂಬಂಧ ನವೆಂಬರ್ 12 ರಂದು ಅಫ್ತಾಬ್ ನನ್ನು ಪೊಲೀಸರು ಬಂಧಿಸಿದ್ದರು. ನಂತರ ಆತನನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ನಂತರ ಅದು ವಿಸ್ತರಣೆಯಾಗಿತ್ತು. ನವೆಂಬರ್ 26 ರಂದು ನ್ಯಾಯಾಲಯ ಆತನನ್ನು 13 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT