ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ 
ದೇಶ

ವೈವಾಹಿಕ ವಿವಾದ ಪ್ರಕರಣಗಳಿಗಾಗಿ ಸುಪ್ರೀಂ ಕೋರ್ಟ್ ನಿಂದ ಮಹಿಳಾ ಪೀಠ ರಚನೆ

ವೈವಾಹಿಕ ವಿವಾದ, ಜಾಮೀನು ವಿಚಾರ ಸೇರಿದಂತೆ ಮತ್ತಿತರ ಅರ್ಜಿಗಳ ವಿಚಾರಣೆಗಾಗಿ ಕರ್ನಾಟಕದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ. ವಿ. ನಾಗರತ್ನ ಸೇರಿದಂತೆ ಎಲ್ಲಾ ಮಹಿಳೆಯರನ್ನೊಳಗೊಂಡ ಪೀಠವೊಂದನ್ನು ಮುಖ್ಯ ನ್ಯಾಯಮೂರ್ತಿ ಡಿ. ವೈ.ಚಂದ್ರಚೂಡ್ ಇಂದು ರಚಿಸಿದ್ದಾರೆ.

ನವದೆಹಲಿ: ವೈವಾಹಿಕ ವಿವಾದ, ಜಾಮೀನು ವಿಚಾರ ಸೇರಿದಂತೆ ಮತ್ತಿತರ ಅರ್ಜಿಗಳ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ. ವಿ. ನಾಗರತ್ನ ಸೇರಿದಂತೆ ಎಲ್ಲಾ ಮಹಿಳೆಯರನ್ನೊಳಗೊಂಡ ಪೀಠವೊಂದನ್ನು ಮುಖ್ಯ ನ್ಯಾಯಮೂರ್ತಿ ಡಿ. ವೈ.ಚಂದ್ರಚೂಡ್ ಇಂದು ರಚಿಸಿದ್ದಾರೆ.

ಈ ರೀತಿಯಾಗಿ ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಮೂರನೇ ಬಾರಿಗೆ ಎಲ್ಲಾ ಮಹಿಳೆಯರನ್ನೊಳಗೊಂಡ ಪೀಠ ರಚಿಸಲಾಗಿದೆ. ವೈವಾಹಿಕ ವಿವಾದಕ್ಕೆ ಸಂಬಂಧಿಸಿದ 10 ವರ್ಗಾವಣೆ ಅರ್ಜಿಗಳು, 10 ಜಾಮೀನು ವಿಚಾರಗಳು ಸೇರಿದಂತೆ 32 ವಿಷಯಗಳ ವಿಚಾರಣೆ ಈ ಪೀಠದ ಮುಂಭಾಗದಲ್ಲಿದೆ.

ಜ್ಞಾನ್ ಸುಧಾ ಮಿಶ್ರಾ ಮತ್ತು ರಂಜನ್ ಪ್ರಕಾಶ್ ದೇಸಾಯಿ ಅವರನ್ನೊಳಗೊಂಡ ಮೊದಲ ಮಹಿಳಾ ನ್ಯಾಯಪೀಠವನ್ನು 2013ರಲ್ಲಿ ರಚಿಸಲಾಗಿತ್ತು. ತದನಂತರ 2018ರಲ್ಲಿ ನ್ಯಾಯಮೂರ್ತಿಗಳಾದ ಆರ್ ಬಾನುಮತಿ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ಮಹಿಳಾ ನ್ಯಾಯ ಪೀಠ ರಚನೆಯಾಗಿತ್ತು.

ಪ್ರಸ್ತುತ ರಚನೆಯಾಗಿರುವ ಮಹಿಳಾ ನ್ಯಾಯಪೀಠದಲ್ಲಿ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ, ಬಿ.ವಿ. ನಾಗರತ್ನ ಮತ್ತು ತ್ರಿವೇದಿ ಅವರನ್ನೊಳಗೊಂಡ ಮೂವರು ಮಹಿಳಾ ನ್ಯಾಯಮೂರ್ತಿಗಳಿದ್ದಾರೆ. ನಾಗರತ್ನ 2027ಕ್ಕೆ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಸೇರಿದಂತೆ 27 ನ್ಯಾಯಮೂರ್ತಿಗಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್