ಸುನಂದಾ ಪುಷ್ಕರ್, ಶಶಿ ತರೂರ್ ಸಾಂದರ್ಭಿಕ ಚಿತ್ರ 
ದೇಶ

ಸುನಂದಾ ಪುಷ್ಕರ್ ಸಾವು ಪ್ರಕರಣ: ಶಶಿ ತರೂರ್ ಗೆ ಹೈಕೋರ್ಟ್ ನೋಟಿಸ್

ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಆರೋಪ ಮುಕ್ತಗೊಂಡಿರುವುದರ ವಿರುದ್ಧ ದೆಹಲಿ ಪೊಲೀಸರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

ನವದೆಹಲಿ: ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಆರೋಪ ಮುಕ್ತಗೊಂಡಿರುವುದರ ವಿರುದ್ಧ ದೆಹಲಿ ಪೊಲೀಸರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

ತನ್ನ ಪತ್ನಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಆಗಸ್ಟ್ 18 ರಂದು ಶಶಿ ತರೂರ್ ಅವರನ್ನು ಪಾಟಿಯಾಲ ಹೌಸ್ ಕೋರ್ಟ್ ಆರೋಪ ಮುಕ್ತಗೊಳಿಸಿತ್ತು.

 'ಪರಿಷ್ಕೃತ ಅರ್ಜಿ ಭರ್ತಿಯಲ್ಲಿ ವಿಳಂಬತೆ ಕೋರಿ ದೆಹಲಿ ಪೊಲೀಸರು ಅರ್ಜಿ ಸಲ್ಲಿಸಿದ ನಂತರ ದೆಹಲಿ ಹೈಕೋರ್ಟ್ ಶಶಿ ತರೂರ್ ಗೆ ನೋಟಿಸ್ ಕಳುಹಿಸಿದ್ದು, ಮುಂದಿನ ವಿಚಾರಣೆಯನ್ನು ಫೆಬ್ರವರಿ 7, 2023ಕ್ಕೆ ನಿಗದಿಪಡಿಸಿದೆ.

ಶಶಿ ತರೂರ್ ಪರ ವಾದಿಸಿದ ಹಿರಿಯ ವಕೀಲ ವಿಕಾಸ್ ಪಾಶ್ವ, ಕೆಳ ನ್ಯಾಯಾಲಯಗಳು ನೀಡಿದ ವಿವಿಧ ಆದೇಶಗಳು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯದ ಮುಂದಿಟ್ಟರು. ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿತರೂರ್ ಅವರನ್ನು ದೆಹಲಿ ಕೋರ್ಟ್ 2021, ಆಗಸ್ಟ್ 18 ರಲ್ಲಿ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT