ಮುಂಬೈ ಪೊಲೀಸರ ಸಾಂದರ್ಭಿಕ ಚಿತ್ರ 
ದೇಶ

ವಾಣಿಜ್ಯ ನಗರಿ ಮುಂಬೈನಲ್ಲಿ ಇಂದಿನಿಂದ ಜನವರಿ 2 ರವರೆಗೂ ಕರ್ಫ್ಯೂ ಜಾರಿಗೆ

ವಾಣಿಜ್ಯ ನಗರಿ ಮುಂಬೈನಲ್ಲಿ ಇಂದಿನಿಂದ ಜನವರಿ 2 ರವರೆಗೂ ಕರ್ಫ್ಯೂವನ್ನು ಪೊಲೀಸರು ಘೋಷಿಸಿದ್ದಾರೆ. ಸಾರ್ವಜನಿಕ ಕಾನೂನು ಸುವ್ಯವಸ್ಥೆಯಲ್ಲಿನ ತೊಡಕನ್ನು ತಡೆಗಟ್ಟುವುದು ಮತ್ತು ಶಾಂತಿಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಇಂದಿನಿಂದ ಜನವರಿ 2 ರವರೆಗೂ ಕರ್ಫ್ಯೂವನ್ನು ಪೊಲೀಸರು ಘೋಷಿಸಿದ್ದಾರೆ. ಸಾರ್ವಜನಿಕ ಕಾನೂನು ಸುವ್ಯವಸ್ಥೆಯಲ್ಲಿನ ತೊಡಕನ್ನು ತಡೆಗಟ್ಟುವುದು ಮತ್ತು ಶಾಂತಿಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಅವಧಿಯಲ್ಲಿ ನಗರಾದಾದ್ಯಂತ ಐದಕ್ಕಿಂತ ಹೆಚ್ಚು ಜನರು ಒಂದೆಡೆ ಸೇರದಂತೆ ನಿರ್ಬಂಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಪ್ರತಿಭಟನೆ, ಘೋಷಣೆ, ಪ್ರದರ್ಶನಗಳನ್ನು ಕೂಡಾ ನಿಷೇಧಿಸಲಾಗಿದೆ. ಡಿಸೆಂಬರ್ 4 ರಿಂದ ಜನವರಿ 2 ರವರೆಗೆ ಗರಿಷ್ಠ ನಗರದಲ್ಲಿ ಶಸ್ತ್ರಾಸ್ತ್ರ ನಿಷೇಧವನ್ನು ಸಹ ಜಾರಿಗೊಳಿಸಲಾಗಿದೆ.

ವಿವಾಹ ಮಹೋತ್ಸವ, ಅಂತ್ಯಕ್ರಿಯೆ, ಕಂಪನಿಗಳು, ಕ್ಲಬ್ ಗಳು, ಸಹಕಾರ ಸಂಘಗಳು ಮತ್ತಿತರ ಅಸೋಸಿಯೇಷನ್ ಗಳ ದೊಡ್ಡ ಮಟ್ಟದ ಸಭೆಗಳನ್ನು ಕೂಡಾ ನಿರ್ಬಂಧಿಸಲಾಗಿದೆ. ಸರ್ಕಾರಿ ಕಚೇರಿಗಳು, ಕೋರ್ಟ್ ಗಳು ಮತ್ತು ಸ್ಥಳೀಯ ಆಡಳಿತಗಳ ಕಾರ್ಯಕ್ರಮಗಳಲ್ಲೂ ಐದಕ್ಕಿಂತ ಹೆಚ್ಚಿನ ಜನರು ಸೇರುವಂತಿಲ್ಲ.

ಶಾಲಾ-ಕಾಲೇಜುಗಳು ಮತ್ತಿತರ ಸಂಸ್ಥೆಗಳಲ್ಲಿ ಶೈಕ್ಷಣಿಕ ಚಟುವಟಿಕೆ ಮತ್ತಿತರ ಸಾಮಾನ್ಯ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರುವಂತಿಲ್ಲ. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಂಬೈ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT