ಭೂಪೇಶ್ ಬಘೇಲ್ 
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಛತ್ತೀಸ್‌ಗಢ ಸಿಎಂ ಬಘೇಲ್ ಉಪ ಕಾರ್ಯದರ್ಶಿ ಬಂಧನ

ಕಲ್ಲಿದ್ದಲು ಲೆವಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಕಚೇರಿಯ ಉಪ ಕಾರ್ಯದರ್ಶಿ ಸೌಮ್ಯಾ ಚೌರಾಸಿಯಾ ಅವರನ್ನು ಜಾರಿ...

ರಾಯ್‌ಪುರ: ಕಲ್ಲಿದ್ದಲು ಲೆವಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಕಚೇರಿಯ ಉಪ ಕಾರ್ಯದರ್ಶಿ ಸೌಮ್ಯಾ ಚೌರಾಸಿಯಾ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ರಾಜ್ಯದ ಪ್ರಬಲ ಅಧಿಕಾರಿ ಎಂದು ಪರಿಗಣಿಸಲ್ಪಟ್ಟ ಚೌರಾಸಿಯಾ ಅವರನ್ನು ವಿಚಾರಣೆಗೆ ಒಳಪಡಿಸಿದ ನಂತರ ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಇಡಿ ಕಸ್ಟಡಿಗೆ ತೆಗೆದುಕೊಂಡಿದೆ.

ಬಂಧನದ ನಂತರ ಅಧಿಕಾರಿಯನ್ನು ಆರೋಗ್ಯ ತಪಾಸಣೆಗಾಗಿ ಕರೆದೊಯ್ಯಲಾಯಿತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಹಲವಾರು ದಾಳಿಗಳನ್ನು ನಡೆಸಿದ ನಂತರ ಕಳೆದ ಅಕ್ಟೋಬರ್‌ನಲ್ಲಿ ರಾಜ್ಯದ ಐಎಎಸ್ ಅಧಿಕಾರಿ ಸಮೀರ್ ವಿಷ್ಣೋಯ್ ಮತ್ತು ಇತರ ಇಬ್ಬರನ್ನು ಬಂಧಿಸಿತ್ತು.

ಛತ್ತೀಸ್‌ಗಢದಲ್ಲಿ ಕಾರ್ಟೆಲ್‌ನಿಂದ ಸಾಗಿಸಲ್ಪಟ್ಟ ಪ್ರತಿ ಟನ್ ಕಲ್ಲಿದ್ದಲಿಗೆ 25 ರೂಪಾಯಿ ಅಕ್ರಮವಾಗಿ ಸುಲಿಗೆ ಮಾಡಲಾದ ಹಗರಣಕ್ಕೆ ಸಂಬಂಧಿಸಿದಂತೆ 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(PMLA) ಅಡಿಯಲ್ಲಿ ಇಡಿ ಶೋಧ ಕಾರ್ಯಾಚರಣೆಗಳನ್ನು ನಡೆಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್