ಮಲ್ಲಿಕಾರ್ಜುನ ಖರ್ಗೆ 
ದೇಶ

ಗುಜರಾತ್ ಚುನಾವಣೆ: ದಲಿತರಿಗೆ, ಹಿಂದುಳಿದವರಿಗೆ ಹೋಗುತ್ತದೆ ಎಂದು ಸರ್ಕಾರ 5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿಲ್ಲ- ಖರ್ಗೆ ಆರೋಪ

ಸರ್ಕಾರ ಹಾಗೂ ಅರೆ ಸರ್ಕಾರಿ ಇಲಾಖೆಗಳು ಸಂಸ್ಥೆಗಳಲ್ಲಿ ಖಾಲಿ ಇರುವ 5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡದೇ ಇರುವ ವಿಷಯವಾಗಿ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ.

ಅಹ್ಮದಾಬಾದ್: ಗುಜರಾತ್ ನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸರ್ಕಾರ ಹಾಗೂ ಅರೆ ಸರ್ಕಾರಿ ಇಲಾಖೆಗಳು ಸಂಸ್ಥೆಗಳಲ್ಲಿ ಖಾಲಿ ಇರುವ 5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡದೇ ಇರುವ ವಿಷಯವಾಗಿ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ.
 
ಹುದ್ದೆಗಳನ್ನು ಭರ್ತಿ ಮಾಡಿದರೆ 5 ಲಕ್ಷ ಉದ್ಯೋಗಗಳ ಪೈಕಿ ಅರ್ಧದಷ್ಟು ಉದ್ಯೋಗಗಳು ದಲಿತ, ಬುಡಕಟ್ಟು, ಹಿಂದುಳಿದ ಸಮುದಾಯಗಳಿಗೆ ಹೋಗುತ್ತವೆ. ಆದ್ದರಿಂದ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ ಎಂದು ಖರ್ಗೆ ಆರೋಪಿಸಿದ್ದಾರೆ.

ಎಸ್ ಟಿ ಮೀಸಲು ವಿಧಾನಸಭಾ ಕ್ಷೇತ್ರವಾದ ಭಿಲೋಡಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಖರ್ಗೆ, ಬಿಜೆಪಿ ಆಡಳಿತವಿರುವ ಈ ರಾಜ್ಯದಲ್ಲಿ ದಲಿತರು, ಹಿಂದುಳಿದವರ ಮೇಲಿನ ದೌರ್ಜನ್ಯ ಪ್ರಕರಣಗಳು ಶೇ.17 ರಷ್ಟು ಏರಿಕೆ ಕಂಡಿದೆ ಎಂದು ಆರೋಪಿಸಿದ್ದಾರೆ. 

ಗುಜರಾತ್ ನಲ್ಲಿ ಡಿ.05 ರಂದು 2 ನೇ ಹಂತದ ಮತದಾನ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಸ್ಥಳೀಯ ನಾಯಕರು ಡಬಲ್ ಇಂಜಿನ್ ಸರ್ಕಾರದ ಬಗ್ಗೆ ಮಾತನಾಡುತ್ತಾರೆ ಆದರೆ 6 ವರ್ಷಗಳಲ್ಲಿ ಮೂವರು ಮುಖ್ಯಮಂತ್ರಿಗಳು ಬದಲಾಗಿದ್ದು, ಇಂಜಿನ್ ಯಾಕೆ ವಿಫಲವಾಯಿತು ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಗುಜರಾತ್ ನಲ್ಲಿ ಕಾಂಗ್ರೆಸ್ ವಿರುದ್ಧದ ಪ್ರಚಾರಕ್ಕೆ ಪಕ್ಷದ 5 ಮುಖ್ಯಮಂತ್ರಿಗಳು, 40 ಕೇಂದ್ರ ಸಚಿವರು, 150 ಸಚಿವರ ಸೇನೆಯನ್ನು ನೆರೆ ರಾಜ್ಯಗಳಿಂದ ಕರೆದುಕೊಂಡುಬಂದಿದೆ ಎಂದು ಖರ್ಗೆ ಹೇಳಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT