ಪ್ರಯಾಣಿಕ ಸಾವು 
ದೇಶ

ಉತ್ತರ ಪ್ರದೇಶ: ರೈಲಿನ ಕಿಟಕಿಯಿಂದ ತೂರಿಬಂತು ಕಬ್ಬಿಣದ ರಾಡ್, ಪ್ರಯಾಣಿಕ ಸಾವು!

ವ್ಯಕ್ತಿಯೊಬ್ಬರು ದೆಹಲಿ-ಕಾನ್ಪುರ ನೀಲಾಂಚಲ್ ಎಕ್ಸ್‌ಪ್ರೆಸ್(12876) ರೈಲಿನಲ್ಲಿ ಪ್ರಯಾಣಿಸುತ್ತಿದ್ದ  ವೇಳೆ ಪ್ರಯಾಗರಾಜ್ ವಿಭಾಗದ ಸೋಮ್ನಾ ಮತ್ತು ದನ್‌ಬಾರ್ ರೈಲು ನಿಲ್ದಾಣಗಳ ನಡುವೆ ಐದು ಅಡಿ ಉದ್ದ ಮತ್ತು 1.5 ಇಂಚು ದಪ್ಪದ ಕಬ್ಬಿಣದ ರಾಡ್...

ಲಖನೌ: ವ್ಯಕ್ತಿಯೊಬ್ಬರು ದೆಹಲಿ-ಕಾನ್ಪುರ ನೀಲಾಂಚಲ್ ಎಕ್ಸ್‌ಪ್ರೆಸ್(12876) ರೈಲಿನಲ್ಲಿ ಪ್ರಯಾಣಿಸುತ್ತಿದ್ದ  ವೇಳೆ ಪ್ರಯಾಗರಾಜ್ ವಿಭಾಗದ ಸೋಮ್ನಾ ಮತ್ತು ದನ್‌ಬಾರ್ ರೈಲು ನಿಲ್ದಾಣಗಳ ನಡುವೆ ಐದು ಅಡಿ ಉದ್ದ ಮತ್ತು 1.5 ಇಂಚು ದಪ್ಪದ ಕಬ್ಬಿಣದ ರಾಡ್ ಕಿಟಕಿಯ ಗಾಜು ಒಡೆದು ತೂರಿ ಬಂದಿದ್ದು, ರಾಡ್ ಕುತ್ತಿಗೆಗೆ ಚುಚ್ಚಿ ಸಾವನ್ನಪ್ಪಿದ್ದಾರೆ. 

ಶುಕ್ರವಾರ ಬೆಳಗ್ಗೆ 8:45ಕ್ಕೆ ಈ ದಾರುಣ ಘಟನೆ ನಡೆದಿದ್ದು, ರೈಲಿನಲ್ಲಿ ಕಿಟಕಿಯ ಪಕ್ಕದಲ್ಲಿ ಕುಳಿತಿದ್ದ ಸುಲ್ತಾನ್‌ಪುರ ಜಿಲ್ಲೆಯ ಗೋಪಿನಾಥಪುರದ ಹರಿಕೇಶ್ ಕುಮಾರ್ ದುಬೆ ಅವರು ರಾಡು ಚುಚ್ಚಿ ಮೃತಪಟ್ಟಿದ್ದಾರೆ. ದುಬೆ ಅವರ ಮೃತದೇಹವನ್ನು ಅಲಿಗಢ ರೈಲು ನಿಲ್ದಾಣದಲ್ಲಿ ರೈಲಿನಿಂದ ಕೆಳಗಿಳಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ರೈಲ್ವೆ ಅಧಿಕಾರಿಗಳು ಅಲಿಗಢ ರೈಲು ನಿಲ್ದಾಣಕ್ಕೆ ಧಾವಿಸಿದರು.

ಮೂಲಗಳ ಪ್ರಕಾರ, ಘಟನೆ ನಡೆದ ಸ್ಥಳದಲ್ಲಿ ರೈಲ್ವೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು ಎನ್ನಲಾಗಿದ್ದು, ಈ ವೇಳೆ ಕಿಟಕಿಯಿಂದ ತೂರಿ ಬಂದ ಕಬ್ಬಿಣದ ರಾಡ್ ಪ್ರಯಾಣಿಕನ ಸಾವಿಗೆ ಕಾರಣವಾಗಿದೆ.

ಈ ಮಧ್ಯೆ, ನಿರ್ಮಾಣ ಹಂತದ ರೈಲ್ವೆ ಕಾಮಗಾರಿಯಿಂದ ಈ ಅವಘಢ ನಡೆದಿದೆ ಎಂಬ ಆರೋಪವನ್ನ ರೈಲ್ವೆ ಅಧಿಕಾರಿಗಳು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಹೀಗಾಗಿ ರೈಲ್ವೆ ಪೊಲೀಸ್ ಪಡೆ(ಆರ್‌ಪಿಎಫ್) ಮತ್ತು ಜನರಲ್ ರೈಲ್ವೆ ಪೊಲೀಸ್(ಜಿಆರ್‌ಪಿ)ಸಿಬ್ಬಂದಿಯನ್ನು ಒಳಗೊಂಡ ಜಂಟಿ ತನಿಖೆಗೆ ಆದೇಶಿಸಲಾಗಿದೆ ಎಂದು ಸಿಪಿಆರ್‌ಒ, ಎನ್‌ಸಿಆರ್, ಹಿಮಾಂಶು ಉಪಾಧ್ಯಾಯ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT