ಪ್ರಧಾನಿ ನರೇಂದ್ರ ಮೋದಿ 
ದೇಶ

ವಿಕಲಚೇತನರಿಗೆ ಅವಕಾಶ ಕಲ್ಪಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ: ಪ್ರಧಾನಿ ನರೇಂದ್ರ ಮೋದಿ

ವಿಶ್ವ ಅಂಗವಿಕಲರ ದಿನವಾದ ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮ ಸರ್ಕಾರವು ವಿಕಲಚೇತನರಿಗೆ ಅವಕಾಶಗಳನ್ನು ಸೃಷ್ಟಿಸಲು ಅನೇಕ ಕ್ರಮಗಳನ್ನು ಕೈಗೊಂಡಿದೆ ಮತ್ತು ಈ ಮೂಲಕ ಅವರು ಬೆಳಗಲು ಅನುವು ಮಾಡಿಕೊಡುತ್ತಿದೆ ಎಂದು ಹೇಳಿದರು.

ನವದೆಹಲಿ: ವಿಶ್ವ ಅಂಗವಿಕಲರ ದಿನವಾದ ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮ ಸರ್ಕಾರವು ವಿಕಲಚೇತನರಿಗೆ ಅವಕಾಶಗಳನ್ನು ಸೃಷ್ಟಿಸಲು ಅನೇಕ ಕ್ರಮಗಳನ್ನು ಕೈಗೊಂಡಿದೆ ಮತ್ತು ಈ ಮೂಲಕ ಅವರು ಬೆಳಗಲು ಅನುವು ಮಾಡಿಕೊಡುತ್ತಿದೆ ಎಂದು ಹೇಳಿದರು.

ಅಲ್ಲದೆ, ಇದೇ ವೇಳೆ ದಿವ್ಯಾಂಗ ಜನರ ಧೈರ್ಯ ಮತ್ತು ಸಾಧನೆಗಳನ್ನು ಶ್ಲಾಘಿಸಿದರು.

'ನಮ್ಮ ಸರ್ಕಾರವು ಪ್ರವೇಶ ಸಾಧ್ಯತೆಯ ಮೇಲೆ ಎಲ್ಲರಿಗೂ ಸಮಾನವಾಗಿ ಗಮನಹರಿಸಿದೆ. ಇದು ಪ್ರಮುಖ ಕಾರ್ಯಕ್ರಮಗಳು ಮತ್ತು ಮುಂದಿನ ಪೀಳಿಗೆಯ ಮೂಲಸೌಕರ್ಯಗಳ ರಚನೆಯಲ್ಲಿ ಪ್ರತಿಫಲಿಸುತ್ತದೆ. ಅಂಗವಿಕಲರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ತಳಮಟ್ಟದಲ್ಲಿ ಕೆಲಸ ಮಾಡುವ ಎಲ್ಲರನ್ನೂ ಕೃತಜ್ಞತೆಯಿಂದ ಸ್ಮರಿಸಲು ನಾನು ಬಯಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.

ಅಂಗವಿಕಲರ ಹಕ್ಕುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅವರು ಎದುರಿಸುತ್ತಿರುವ ಸವಾಲುಗಳನ್ನು ಎದುರಿಸಲು ರಾಜಕೀಯ ಇಚ್ಛಾಶಕ್ತಿ ಮತ್ತು ಸಂಪನ್ಮೂಲಗಳನ್ನು ಸಜ್ಜುಗೊಳಿಸಲು ಪ್ರತಿವರ್ಷ ಡಿಸೆಂಬರ್ 3 ರಂದು ಈ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT