ಅಮೇರಿಕಾದಲ್ಲಿ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರು ಪದ್ಮಭೂಷಣ ಪ್ರಶಸ್ತಿಯನ್ನು ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಅವರಿಗೆ ಹಸ್ತಾಂತರಿಸಿದರು 
ದೇಶ

'ಭಾರತ ನನ್ನ ಭಾಗ, ನಾನು ಎಲ್ಲಿಗೆ ಹೋದರೂ ಅದನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ': ಗೂಗಲ್ ಸಿಇಒ ಸುಂದರ್ ಪಿಚೈ

'ಭಾರತವು ನನ್ನ ಭಾಗವಾಗಿದೆ, ಅದನ್ನು ನಾನು ಹೋಗುವಲ್ಲಿಗೆಲ್ಲಾ ನನ್ನೊಂದಿದೆ ಕೊಂಡೊಯ್ಯುತ್ತೇನೆ' ಎಂದು ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ವಾಷಿಂಗ್ಟನ್: 'ಭಾರತವು ನನ್ನ ಭಾಗವಾಗಿದೆ, ಅದನ್ನು ನಾನು ಹೋಗುವಲ್ಲಿಗೆಲ್ಲಾ ನನ್ನೊಂದಿದೆ ಕೊಂಡೊಯ್ಯುತ್ತೇನೆ' ಎಂದು ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಅವರು ಅಮೆರಿಕದ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರಿಂದ ನಿನ್ನೆ ಭಾರತ ಸರ್ಕಾರದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿ ಹೀಗೆ ಹೇಳಿದ್ದಾರೆ. 

ಭಾರತೀಯ ಮೂಲದ ಅಮೆರಿಕನ್ ಪಿಚೈ ಅವರಿಗೆ ವ್ಯಾಪಾರ ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಮಾಡಿದ ಅದ್ವಿತೀಯ ಸಾಧನೆ, ಸೇವೆಗಾಗಿ ಕೇಂದ್ರ ಸರ್ಕಾರ 2022 ರ ಪದ್ಮಭೂಷಣ ಪ್ರಶಸ್ತಿಯನ್ನು ಘೋಷಿಸಿತ್ತು. ಮಧುರೈ ಮೂಲದ ಪಿಚೈ ಅವರು ಈ ವರ್ಷದ ಆರಂಭದಲ್ಲಿ 17 ಪ್ರಶಸ್ತಿ ಪುರಸ್ಕೃತರಲ್ಲಿ ಒಬ್ಬರಾಗಿದ್ದರು. ಸಮಾರಂಭಕ್ಕೆ ಅವರು ಬಂದಿರಲಿಲ್ಲ. 

ನಿನ್ನೆ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ತಮ್ಮ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಅವರು ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಅಗಾಧವಾದ ಗೌರವಕ್ಕಾಗಿ ನಾನು ಭಾರತ ಸರ್ಕಾರ ಮತ್ತು ಭಾರತದ ಜನತೆಗೆ ಕೃತಜ್ಞನಾಗಿದ್ದೇನೆ. ನನ್ನನ್ನು ರೂಪಿಸಿದ ದೇಶವು ಈ ರೀತಿಯಲ್ಲಿ ಗೌರವಿಸಿರುವುದು ನಂಬಲಾಗದಷ್ಟು ಅರ್ಥಪೂರ್ಣವಾಗಿದೆ ಎಂದು 50 ವರ್ಷದ ಪಿಚೈ ಹೇಳಿದ್ದಾರೆ. 

ಭಾರತ ದೇಶವು ನನ್ನ ಭಾಗವಾಗಿದೆ. ನಾನು ಎಲ್ಲಿಗೆ ಹೋದರೂ ಅದನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ. ನನ್ನ ಆಸಕ್ತಿಗಳನ್ನು ಅನ್ವೇಷಿಸಲು ನನಗೆ ಅವಕಾಶಗಳನ್ನು ತೋರಿಸಿಕೊಡಲು ಬಹಳಷ್ಟು ತ್ಯಾಗ ಮಾಡಿದ ಪೋಷಕರೊಂದಿಗೆ ಕಲಿಕೆ ಮತ್ತು ಜ್ಞಾನವನ್ನು ಪಾಲಿಸುವ ಕುಟುಂಬದಲ್ಲಿ ಬೆಳೆಯಲು ನಾನು ಅದೃಷ್ಟಶಾಲಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಸ್ಯಾನ್ ಫ್ರಾನ್ಸಿಸ್ಕೋದ ಭಾರತದ ಕಾನ್ಸುಲ್ ಜನರಲ್ ಟಿ ವಿ ನಾಗೇಂದ್ರ ಪ್ರಸಾದ್ ಕೂಡ ಉಪಸ್ಥಿತರಿದ್ದರು. ಪರಿವರ್ತನೆಗಾಗಿ ತಂತ್ರಜ್ಞಾನದ ಮಿತಿಯಿಲ್ಲದ ಸಾಧ್ಯತೆಗಳನ್ನು ಪಿಚೈ ಪ್ರತಿನಿಧಿಸಿದ್ದಾರೆ ಎಂದು ಸಂಧು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT