ಪಿಂಕಿ ಇರಾನಿ 
ದೇಶ

ವಂಚಕ ಸುಕೇಶ್ ಚಂದ್ರಶೇಖರ್ ಆಪ್ತೆ ಪಿಂಕಿ ಇರಾನಿಗೆ ಡಿಸೆಂಬರ್ 21 ರವರೆಗೂ ನ್ಯಾಯಾಂಗ ಬಂಧನ

200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ವಂಚಕ ಸುಕೇಶ್ ಚಂದ್ರಶೇಖರ್ ಆಪ್ತೆ ಪಿಂಕಿ ಇರಾನಿಯನ್ನು ಡಿ.21ರವರೆಗೂ ದೆಹಲಿ ನ್ಯಾಯಾಲಯವೊಂದು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.  

ನವದೆಹಲಿ: 200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ವಂಚಕ ಸುಕೇಶ್ ಚಂದ್ರಶೇಖರ್ ಆಪ್ತೆ ಪಿಂಕಿ ಇರಾನಿಯನ್ನು ಡಿ.21ರವರೆಗೂ ದೆಹಲಿ ನ್ಯಾಯಾಲಯವೊಂದು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.  

ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಮುಂಬೈ ಮೂಲದ ಪಿಂಕಿ ಇರಾನಿ ಚಂದ್ರಶೇಖರ್ ನ ಆಪ್ತೆಯಾಗಿದ್ದು, ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆತನಿಗೆ ಪರಿಚಯಿಸಿದ್ದಳು ಎನ್ನಲಾಗಿದೆ.

ಆಕೆಯ ನ್ಯಾಯಾಂಗ ಬಂಧನ ಕೋರಿ ದೆಹಲಿ ಅಪರಾಧ ವಿಭಾಗದ ಪೊಲೀಸರು ಸಲ್ಲಿಸಿದ ವರದಿಯನ್ನು ಪರಿಗಣಿಸಿದ ನಂತರ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದ್ರ ಮಲ್ಲಿಕ್ ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 30 ರಂದು ಆರೋಪಿಯನ್ನು ಬಂಧಿಸಲಾಗಿದ್ದು, ಸೂಕ್ತ ರೀತಿಯಲ್ಲಿ ತನಿಖೆ ಅಲ್ಲದೇ,  ಮುಂದೆ ಯಾವುದೇ ರೀತಿಯ ಅಪರಾಧದಲ್ಲಿ ತೊಡಗಿಸಿಕೊಳ್ಳಲು ತಡೆಯಲು ಕಸ್ಟಡಿಯ ಆಗತ್ಯವಿದೆ ಎಂದು ನ್ಯಾಯಾಲಯ ಹೇಳಿತು.

ಪಾಟಿಯಾಲ ಹೌಸ್ ಕೋರ್ಟ್‌ನಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದಾಗ ನೀಡಿರುವ ಹೇಳಿಕೆ 'ಸಂಪೂರ್ಣ ಸುಳ್ಳು ಎಂದು ಪಿಂಕಿ ಇರಾನಿ ಶನಿವಾರ ಬಹಿರಂಗಪಡಿಸಿದರು. ಆರೋಪಿಯು ತನ್ನ ಎಲ್ಲಾ ಹೇಳಿಕೆಗಳನ್ನು ಹಿಂತೆಗೆದುಕೊಳ್ಳುತ್ತಿರುವುದಾಗಿ ಹೇಳಿದ್ದು ಅದನ್ನು ದಾಖಲೆಯಲ್ಲಿ ಇಡಬೇಕು ಎಂದು ನ್ಯಾಯಾಲಯ ಸೂಚಿಸಿತು.

ಕಂಪನಿಗಳು ಮತ್ತಿತರ ಕಡೆಗಳಿಂದ ಹಣ ಸುಲಿಗೆಗೆ ಪಿಂಕಿ ಇರಾನಿಯನ್ನು ಬಳಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.  ಕಳೆದ ವಾರ ನಟಿ ಜಾಕ್ವೆಲಿನ್ ಪರ್ನಾಂಡಿಸ್ ಅವರ ಹೇಳಿಕೆಯನ್ನು ದೆಹಲಿ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ದಾಖಲಿಸಿದ್ದರು. ಪಿಂಕಿಯನ್ನು ಸಹ ಈ ಹಿಂದೆಯೇ ಬಂಧಿಸಲಾಗಿತ್ತು. ಆದರೆ ಆಕೆ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಳು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT