ಪಿಂಕಿ ಇರಾನಿ 
ದೇಶ

ವಂಚಕ ಸುಕೇಶ್ ಚಂದ್ರಶೇಖರ್ ಆಪ್ತೆ ಪಿಂಕಿ ಇರಾನಿಗೆ ಡಿಸೆಂಬರ್ 21 ರವರೆಗೂ ನ್ಯಾಯಾಂಗ ಬಂಧನ

200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ವಂಚಕ ಸುಕೇಶ್ ಚಂದ್ರಶೇಖರ್ ಆಪ್ತೆ ಪಿಂಕಿ ಇರಾನಿಯನ್ನು ಡಿ.21ರವರೆಗೂ ದೆಹಲಿ ನ್ಯಾಯಾಲಯವೊಂದು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.  

ನವದೆಹಲಿ: 200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ವಂಚಕ ಸುಕೇಶ್ ಚಂದ್ರಶೇಖರ್ ಆಪ್ತೆ ಪಿಂಕಿ ಇರಾನಿಯನ್ನು ಡಿ.21ರವರೆಗೂ ದೆಹಲಿ ನ್ಯಾಯಾಲಯವೊಂದು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.  

ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಮುಂಬೈ ಮೂಲದ ಪಿಂಕಿ ಇರಾನಿ ಚಂದ್ರಶೇಖರ್ ನ ಆಪ್ತೆಯಾಗಿದ್ದು, ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆತನಿಗೆ ಪರಿಚಯಿಸಿದ್ದಳು ಎನ್ನಲಾಗಿದೆ.

ಆಕೆಯ ನ್ಯಾಯಾಂಗ ಬಂಧನ ಕೋರಿ ದೆಹಲಿ ಅಪರಾಧ ವಿಭಾಗದ ಪೊಲೀಸರು ಸಲ್ಲಿಸಿದ ವರದಿಯನ್ನು ಪರಿಗಣಿಸಿದ ನಂತರ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದ್ರ ಮಲ್ಲಿಕ್ ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 30 ರಂದು ಆರೋಪಿಯನ್ನು ಬಂಧಿಸಲಾಗಿದ್ದು, ಸೂಕ್ತ ರೀತಿಯಲ್ಲಿ ತನಿಖೆ ಅಲ್ಲದೇ,  ಮುಂದೆ ಯಾವುದೇ ರೀತಿಯ ಅಪರಾಧದಲ್ಲಿ ತೊಡಗಿಸಿಕೊಳ್ಳಲು ತಡೆಯಲು ಕಸ್ಟಡಿಯ ಆಗತ್ಯವಿದೆ ಎಂದು ನ್ಯಾಯಾಲಯ ಹೇಳಿತು.

ಪಾಟಿಯಾಲ ಹೌಸ್ ಕೋರ್ಟ್‌ನಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದಾಗ ನೀಡಿರುವ ಹೇಳಿಕೆ 'ಸಂಪೂರ್ಣ ಸುಳ್ಳು ಎಂದು ಪಿಂಕಿ ಇರಾನಿ ಶನಿವಾರ ಬಹಿರಂಗಪಡಿಸಿದರು. ಆರೋಪಿಯು ತನ್ನ ಎಲ್ಲಾ ಹೇಳಿಕೆಗಳನ್ನು ಹಿಂತೆಗೆದುಕೊಳ್ಳುತ್ತಿರುವುದಾಗಿ ಹೇಳಿದ್ದು ಅದನ್ನು ದಾಖಲೆಯಲ್ಲಿ ಇಡಬೇಕು ಎಂದು ನ್ಯಾಯಾಲಯ ಸೂಚಿಸಿತು.

ಕಂಪನಿಗಳು ಮತ್ತಿತರ ಕಡೆಗಳಿಂದ ಹಣ ಸುಲಿಗೆಗೆ ಪಿಂಕಿ ಇರಾನಿಯನ್ನು ಬಳಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು.  ಕಳೆದ ವಾರ ನಟಿ ಜಾಕ್ವೆಲಿನ್ ಪರ್ನಾಂಡಿಸ್ ಅವರ ಹೇಳಿಕೆಯನ್ನು ದೆಹಲಿ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ದಾಖಲಿಸಿದ್ದರು. ಪಿಂಕಿಯನ್ನು ಸಹ ಈ ಹಿಂದೆಯೇ ಬಂಧಿಸಲಾಗಿತ್ತು. ಆದರೆ ಆಕೆ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಳು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT