ಸಾಂದರ್ಭಿಕ ಚಿತ್ರ 
ದೇಶ

ಗಾಳಿಯ ಗುಣಮಟ್ಟಕ್ಕಾಗಿ ಹಿಮಾಚಲದ ಎರಡು ಪಟ್ಟಣಗಳಿಗೆ 'ಸ್ವಚ್ಛ ವಾಯು ಸರ್ವೇಕ್ಷಣ್' ಪ್ರಶಸ್ತಿ

ಗಾಳಿಯ ಗುಣಮಟ್ಟಕ್ಕಾಗಿ ಹಿಮಾಚಲ ಪ್ರದೇಶದ ಸುಂದರನಗರ ಮತ್ತು ನಲಗಢ ಪಟ್ಟಣ 2022ನೇ ಸಾಲಿನ ರಾಷ್ಟ್ರೀಯ ಸ್ವಚ್ಛ ವಾಯು ಸರ್ವೇಕ್ಷಣ್  ಪ್ರಶಸ್ತಿ ಪಡೆದುಕೊಂಡಿವೆ.

ಶಿಮ್ಲಾ: ಗಾಳಿಯ ಗುಣಮಟ್ಟಕ್ಕಾಗಿ ಹಿಮಾಚಲ ಪ್ರದೇಶದ ಸುಂದರನಗರ ಮತ್ತು ನಲಗಢ ಪಟ್ಟಣ 2022ನೇ ಸಾಲಿನ ರಾಷ್ಟ್ರೀಯ ಸ್ವಚ್ಛ ವಾಯು ಸರ್ವೇಕ್ಷಣ್  ಪ್ರಶಸ್ತಿ ಪಡೆದುಕೊಂಡಿವೆ.

ರಾಷ್ಟ್ರೀಯ ಸ್ವಚ್ಛ ವಾಯು ಯೋಜನೆಯಿಂದ ನೀಡುವ ಈ ಪ್ರಶಸ್ತಿಯಲ್ಲಿ ಸುಂದರನಗರ ಎರಡನೇ ಸ್ಥಾನ ಪಡೆದಿದ್ದರೆ, ನಲಗಢ ಪಟ್ಟಣ ಮೂರನೇ ಸ್ಥಾನ ಪಡೆದಿದೆ.

ಕೇಂದ್ರ ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಮತ್ತು ಒಡಿಶಾ ರಾಜ್ಯಪಾಲ ಗಣೇಶಿ ಲಾಲ್ ಅವರು ಶನಿವಾರ ಭುವನೇಶ್ವರದಲ್ಲಿ ‘ವಾಯು’ ಎಂಬ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಹಿಮಾಚಲ ಪ್ರದೇಶ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯ ವೈಜ್ಞಾನಿಕ ಅಧಿಕಾರಿ ಡಾ.ಮನೋಜ್ ಚೌಹಾಣ್ ಎರಡು ಪಟ್ಟಣಗಳಿಗೆ ಕ್ರಮವಾಗಿ 25 ಲಕ್ಷ ಹಾಗೂ 12.5 ಲಕ್ಷ ರೂಪಾಯಿ ನಗದು ಪ್ರಶಸ್ತಿಯನ್ನು ರಾಜ್ಯದ ಪರವಾಗಿ ಸ್ವೀಕರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT