ಉಮರ್ ಖಾಲಿದ್ 
ದೇಶ

ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್, ಖಾಲಿದ್ ಸೈಫಿ ಖುಲಾಸೆ

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಯುನೈಟೆಡ್ ಅಗೇನ್ಸ್ಟ್ ಹೇಟ್ ಸಂಸ್ಥಾಪಕ ಖಾಲಿದ್ ಸೈಫಿ ಅವರನ್ನು ಕೋರ್ಟ್ ಖುಲಾಸೆಗೊಳಿಸಿದೆ.

ನವದೆಹಲಿ: 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಯುನೈಟೆಡ್ ಅಗೇನ್ಸ್ಟ್ ಹೇಟ್ ಸಂಸ್ಥಾಪಕ ಖಾಲಿದ್ ಸೈಫಿ ಅವರನ್ನು ಕೋರ್ಟ್ ಖುಲಾಸೆಗೊಳಿಸಿದೆ.

2020, ಫೆಬ್ರವರಿ 24 ರಂದು ಮೈನ್ ಕರವಾಲ್ ನಗರ ರಸ್ತೆಯಲ್ಲಿ ಗಲಭೆಯ ಗುಂಪೊಂದು ಕಲ್ಲು ತೂರಾಟ ನಡೆಸಿದೆ ಎಂದು ಕಾನ್‌ಸ್ಟೆಬಲ್ ಸಂಗ್ರಾಮ್ ಸಿಂಗ್ ಅವರು ನೀಡಿದ್ದ ಹೇಳಿಕೆಯ ಆಧಾರದ ಮೇಲೆ ಮರ್ ಖಾಲಿದ್, ಖಾಲಿದ್ ಸೈಫಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ದೆಹಲಿ ಗಲಭೆ ಪ್ರಕರಣದಿಂದ ಉಮರ್ ಖಾಲಿದ್ ಮತ್ತು ಖಾಲಿದ್ ಸೈಫಿ ಅವರನ್ನು ಖುಲಾಸೆಗೊಳಿಸಿದ್ದಾರೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಮಧುಕರ್ ಪಾಂಡೆ ಅವರು ತಿಳಿಸಿದ್ದಾರೆ.

ಉಮರ್ ಖಾಲಿದ್ ಅವರು ಹಲವಾರು ಇತರ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ ಮತ್ತು ಗಲಭೆಗಳ ಹಿಂದಿನ ದೊಡ್ಡ ಪಿತೂರಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಅಡಿಯಲ್ಲಿ ಕೇಸ್ ದಾಖಲಿಸಲಾಗಿದ್ದು, ಈ ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಉಳಿದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT