ಕಾಶ್ಮೀರಿ ಪಂಡಿತರು 
ದೇಶ

ಕಣಿವೆಯಲ್ಲಿ ಕಾಶ್ಮೀರಿ ಪಂಡಿತರಿಗೆ ಬೆದರಿಕೆ ಪತ್ರ: ಲಷ್ಕರ್ 'ಹಿಟ್‌ಲಿಸ್ಟ್'ನಲ್ಲಿ 56 ಮಂದಿ!

ಲಷ್ಕರ್ ನಡೆಸುತ್ತಿರುವ ಸಾಮಾಜಿಕ ಮಾಧ್ಯಮ ಹ್ಯಾಂಡಲ್ 'ಕಾಶ್ಮೀರ ಫೈಟ್' ಮತ್ತೊಮ್ಮೆ ಕಣಿವೆಯಲ್ಲಿ ಕೆಲಸ ಮಾಡುತ್ತಿರುವ ಕಾಶ್ಮೀರಿ ಪಂಡಿತರಿಗೆ ಜೀವ ಬೆದರಿಕೆ ಹಾಕಿದೆ. 

ಶ್ರೀನಗರ: ಲಷ್ಕರ್ ನಡೆಸುತ್ತಿರುವ ಸಾಮಾಜಿಕ ಮಾಧ್ಯಮ ಹ್ಯಾಂಡಲ್ 'ಕಾಶ್ಮೀರ ಫೈಟ್' ಮತ್ತೊಮ್ಮೆ ಕಣಿವೆಯಲ್ಲಿ ಕೆಲಸ ಮಾಡುತ್ತಿರುವ ಕಾಶ್ಮೀರಿ ಪಂಡಿತರಿಗೆ ಜೀವ ಬೆದರಿಕೆ ಹಾಕಿದೆ. 

ಭಯೋತ್ಪಾದಕ ಸಂಘಟನೆಯು ತಮ್ಮ ಗುರಿಯಾಗಿರುವ 56 ಕಾಶ್ಮೀರಿ ಪಂಡಿತ್ ಉದ್ಯೋಗಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಧಾನಿಯವರ ಪುನರ್ವಸತಿ ಪ್ಯಾಕೇಜ್ ಅಡಿಯಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿರುವುದಾಗಿ ಭಯೋತ್ಪಾದಕ ಸಂಘಟನೆ ಹೇಳಿದೆ.

ಈಗಾಗಲೇ ಕಾಶ್ಮೀರಿ ಪಂಡಿತ ಉದ್ಯೋಗಿಗಳು ಭಯದ ವಾತಾವರಣದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಈ ರೀತಿಯ ಬೆದರಿಕೆ ಪತ್ರಗಳು ಭಯವನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇನ್ನು ಸುದ್ದಿಗಾರರೊಂದಿಗೆ ಮಾತನಾಡಿದ ಕಾಶ್ಮೀರಿ ಪಂಡಿತ್ ನೌಕರರು, '50 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೆಸರಿಸಲಾಗಿದೆ. ಈ ಅಧಿಕೃತ ದಾಖಲೆಗಳು ಭಯೋತ್ಪಾದಕರಿಗೆ ಹೇಗೆ ತಲುಪಿದವು ಎಂಬುದು ಇಲ್ಲಿನ ಯಕ್ಷ ಪ್ರಶ್ನೆಯಾಗಿದೆ.

ಪತ್ರದಿಂದಾಗಿ ಉದ್ಯೋಗಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ
ಕಾಶ್ಮೀರಿ ಪಂಡಿತರೊಬ್ಬರು, ಉದ್ಯೋಗಿಗಳ ಹೆಸರನ್ನು ಪಟ್ಟಿಯಲ್ಲಿ ಬರೆದಿರುವುದು ತುಂಬಾ ಆಘಾತಕಾರಿಯಾಗಿದೆ. ನಾವು ಈಗಾಗಲೇ ಭಯದಿಂದ ಬದುಕುತ್ತಿದ್ದೇವೆ. ಈ ನಿಟ್ಟಿನಲ್ಲಿ ಸರ್ಕಾರ ತನಿಖಾ ಸಮಿತಿ ರಚಿಸಬೇಕು. ಸುಮಾರು ಏಳು ತಿಂಗಳಿಂದ ವರ್ಗಾವಣೆಗೆ ಒತ್ತಾಯಿಸುತ್ತಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT