ಸಂಗ್ರಹ ಚಿತ್ರ 
ದೇಶ

ಉತ್ತರಾಖಂಡ: ಕಾಳಿ ನದಿ ನಿರ್ಮಾಣ ಕಾಮಗಾರಿ ವಿರೋಧಿಸಿ ಭಾರತೀಯ ಕಾರ್ಮಿಕರ ಮೇಲೆ ನೇಪಾಳಿಗರಿಂದ ಕಲ್ಲು ತೂರಾಟ!

ಉತ್ತರಾಖಂಡದ ಪಿಥೋರಗಢ್‌ದಲ್ಲಿರುವ ಭಾರತ-ನೇಪಾಳ ಗಡಿಯಲ್ಲಿ ಕಾಳಿ ನದಿ ನಿರ್ಮಾಣ ಕಾಮಗಾರಿ ವಿರೋಧಿಸಿ ಭಾರತೀಯ ಕಾರ್ಮಿಕರ ಮೇಲೆ ನೇಪಾಳಿಗರು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಪಿತೋರಗಢ: ಉತ್ತರಾಖಂಡದ ಪಿಥೋರಗಢ್‌ದಲ್ಲಿರುವ ಭಾರತ-ನೇಪಾಳ ಗಡಿಯಲ್ಲಿ ಕಾಳಿ ನದಿ ನಿರ್ಮಾಣ ಕಾಮಗಾರಿ ವಿರೋಧಿಸಿ ಭಾರತೀಯ ಕಾರ್ಮಿಕರ ಮೇಲೆ ನೇಪಾಳಿಗರು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಭಾರತವು ಕಾಳಿ ನದಿಗೆ ಒಡ್ಡು ನಿರ್ಮಿಸುವುದನ್ನು ನೇಪಾಳದ ಸಂಘಟನೆಗಳು ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಕಲ್ಲು ತೂರಾಟ ನಡೆದಿದೆ. ಧಾರ್ಚುಲಾ ಪ್ರದೇಶದಲ್ಲಿ ಭಾನುವಾರ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಕೆಲವು ಕಾರ್ಮಿಕರು ಗಾಯಗೊಂಡಿದ್ದಾರೆ. ಈ ಹಿಂದೆಯೂ ಕಲ್ಲು ತೂರಾಟದ ಘಟನೆಗಳು ವರದಿಯಾಗಿದ್ದವು.

ಒಡ್ಡು ತನ್ನ ಭಾಗದಲ್ಲಿ ನಿರ್ಮಾಣವಾಗುತ್ತಿದ್ದು, ಹಿಮಾಲಯಕ್ಕೆ ತೊಂದರೆಯಾಗಬಾರದು ಎಂದು ಭಾರತ ಸಮರ್ಥಿಸಿಕೊಂಡಿದೆ.

ವರದಿಗಳ ಪ್ರಕಾರ, ಶಾರದಾ ನದಿ ಮತ್ತು ಮಹಾಕಾಳಿ ನದಿ ಎಂದೂ ಕರೆಯಲ್ಪಡುವ ಕಾಳಿ ನದಿಯು ಉತ್ತರಾಖಂಡದ ಪಿಥೋರಗಢ ಜಿಲ್ಲೆಯ ಹಿಮಾಲಯದ ಕಾಲಾಪಾನಿಯಲ್ಲಿ ಹುಟ್ಟುತ್ತದೆ. ಇದು ಭಾರತದೊಂದಿಗೆ ನೇಪಾಳದ ಪಶ್ಚಿಮ ಗಡಿಯಲ್ಲಿ ಹರಿಯುತ್ತದೆ.

ಭಾರತದ ಭಾಗದಲ್ಲಿ 1,700 ಮೀಟರ್‌ಗಿಂತಲೂ ಹೆಚ್ಚು ಉದ್ದದ ಒಡ್ಡು ನಿರ್ಮಾಣವು ಈ ವರ್ಷದ ಮಾರ್ಚ್‌ನಲ್ಲಿ ಪ್ರಾರಂಭವಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸುವ ಎಲ್ಲ ಪ್ರಯತ್ನಗಳನ್ನು ಸ್ವಾಗತಿಸಲಾಗುತ್ತದೆ': ಪುಟಿನ್ ಜೊತೆಗೆ ಪ್ರಧಾನಿ ಮೋದಿ ಮಾತುಕತೆ

ICC: ಪುರುಷರ ವಿಶ್ವಕಪ್ ಟ್ರೋಫಿಗಿಂತಲೂ ಮಹಿಳೆಯರ ವಿಶ್ವಕಪ್ ಬಹುಮಾನ ಹಣ ದುಪ್ಪಟ್ಟಾಯ್ತು!

ಏರ್ ಇಂಡಿಯಾ ವಿಮಾನದ ಕಾಕ್‌ಪಿಟ್‌ನಲ್ಲಿ ಬೆಂಕಿಯ ಸೂಚನೆ; ದೆಹಲಿಯಲ್ಲಿ ತುರ್ತು ಭೂಸ್ಪರ್ಶ

ಆಗಸ್ಟ್‌ನಲ್ಲಿ 20 ಬಿಲಿಯನ್ ದಾಟಿದ ಯುಪಿಐ ವಹಿವಾಟು

Dharmasthala ಪ್ರಕರಣದಲ್ಲಿ 'ಬಹಳ ದೊಡ್ಡ ಪಿತೂರಿ'; ತನಿಖೆಯನ್ನು NIA ಅಥವಾ CBIಗೆ ವಹಿಸಬೇಕು: BY ವಿಜಯೇಂದ್ರ ಆಗ್ರಹ

SCROLL FOR NEXT