ಸಂಗ್ರಹ ಚಿತ್ರ 
ದೇಶ

ಉತ್ತರಾಖಂಡ: ಕಾಳಿ ನದಿ ನಿರ್ಮಾಣ ಕಾಮಗಾರಿ ವಿರೋಧಿಸಿ ಭಾರತೀಯ ಕಾರ್ಮಿಕರ ಮೇಲೆ ನೇಪಾಳಿಗರಿಂದ ಕಲ್ಲು ತೂರಾಟ!

ಉತ್ತರಾಖಂಡದ ಪಿಥೋರಗಢ್‌ದಲ್ಲಿರುವ ಭಾರತ-ನೇಪಾಳ ಗಡಿಯಲ್ಲಿ ಕಾಳಿ ನದಿ ನಿರ್ಮಾಣ ಕಾಮಗಾರಿ ವಿರೋಧಿಸಿ ಭಾರತೀಯ ಕಾರ್ಮಿಕರ ಮೇಲೆ ನೇಪಾಳಿಗರು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಪಿತೋರಗಢ: ಉತ್ತರಾಖಂಡದ ಪಿಥೋರಗಢ್‌ದಲ್ಲಿರುವ ಭಾರತ-ನೇಪಾಳ ಗಡಿಯಲ್ಲಿ ಕಾಳಿ ನದಿ ನಿರ್ಮಾಣ ಕಾಮಗಾರಿ ವಿರೋಧಿಸಿ ಭಾರತೀಯ ಕಾರ್ಮಿಕರ ಮೇಲೆ ನೇಪಾಳಿಗರು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಭಾರತವು ಕಾಳಿ ನದಿಗೆ ಒಡ್ಡು ನಿರ್ಮಿಸುವುದನ್ನು ನೇಪಾಳದ ಸಂಘಟನೆಗಳು ವಿರೋಧಿಸುತ್ತಿರುವ ಹಿನ್ನೆಲೆಯಲ್ಲಿ ಕಲ್ಲು ತೂರಾಟ ನಡೆದಿದೆ. ಧಾರ್ಚುಲಾ ಪ್ರದೇಶದಲ್ಲಿ ಭಾನುವಾರ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಕೆಲವು ಕಾರ್ಮಿಕರು ಗಾಯಗೊಂಡಿದ್ದಾರೆ. ಈ ಹಿಂದೆಯೂ ಕಲ್ಲು ತೂರಾಟದ ಘಟನೆಗಳು ವರದಿಯಾಗಿದ್ದವು.

ಒಡ್ಡು ತನ್ನ ಭಾಗದಲ್ಲಿ ನಿರ್ಮಾಣವಾಗುತ್ತಿದ್ದು, ಹಿಮಾಲಯಕ್ಕೆ ತೊಂದರೆಯಾಗಬಾರದು ಎಂದು ಭಾರತ ಸಮರ್ಥಿಸಿಕೊಂಡಿದೆ.

ವರದಿಗಳ ಪ್ರಕಾರ, ಶಾರದಾ ನದಿ ಮತ್ತು ಮಹಾಕಾಳಿ ನದಿ ಎಂದೂ ಕರೆಯಲ್ಪಡುವ ಕಾಳಿ ನದಿಯು ಉತ್ತರಾಖಂಡದ ಪಿಥೋರಗಢ ಜಿಲ್ಲೆಯ ಹಿಮಾಲಯದ ಕಾಲಾಪಾನಿಯಲ್ಲಿ ಹುಟ್ಟುತ್ತದೆ. ಇದು ಭಾರತದೊಂದಿಗೆ ನೇಪಾಳದ ಪಶ್ಚಿಮ ಗಡಿಯಲ್ಲಿ ಹರಿಯುತ್ತದೆ.

ಭಾರತದ ಭಾಗದಲ್ಲಿ 1,700 ಮೀಟರ್‌ಗಿಂತಲೂ ಹೆಚ್ಚು ಉದ್ದದ ಒಡ್ಡು ನಿರ್ಮಾಣವು ಈ ವರ್ಷದ ಮಾರ್ಚ್‌ನಲ್ಲಿ ಪ್ರಾರಂಭವಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಜವಹರಲಾಲ್ ನೆಹರೂ ಅವರ ಏಕಪಕ್ಷೀಯ ಕದನ ವಿರಾಮ PoK ಸೃಷ್ಟಿಗೆ ಕಾರಣವಾಯಿತು': ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಅನ್ನಭಾಗ್ಯ ಯೋಜನೆ; ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲು ಇಂದಿರಾ ಕಿಟ್ ನೀಡಲು ಸರ್ಕಾರ ಮುಂದು..!

'ಶ್ರೀಮಂತಿಕೆ- ದೊಡ್ಡಸ್ಥಿಕೆಯ ಚಾದರವನ್ನೇ ಹೊದ್ದು ಮಲಗಿದವರು ಕ್ಷುಲ್ಲಕ ಕಾರಣ ನೀಡಿ ಸಮೀಕ್ಷೆಯಿಂದ ಹೊರಗುಳಿಯುವುದು ಉದ್ದಟತನದ ಪರಮಾವಧಿ'

Shakthi Scheme Record-'ಶಕ್ತಿ ಯೋಜನೆ'ಗೆ ಸಿಕ್ಕಿತು ವಿಶ್ವ ಮನ್ನಣೆ: ಲಂಡನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

ಬೆಂಗಳೂರು: ಪ್ರೀತಿಸಲು ನಿರಾಕರಣೆ; ಪರೀಕ್ಷೆ ಬರೆದು ಮನೆಗೆ ವಾಪಾಸಾಗುತ್ತಿದ್ದ ವಿದ್ಯಾರ್ಥಿನಿ ಕತ್ತು ಕೊಯ್ದು ಕೊಲೆ

SCROLL FOR NEXT