ತೆಲಂಗಾಣ ಸಿಎಂ ಪುತ್ರಿ ಕವಿತಾ(ಸಂಗ್ರಹ ಚಿತ್ರ) 
ದೇಶ

ದೆಹಲಿ ಅಬಕಾರಿ ಹಗರಣ: ಕೆಸಿಆರ್ ಪುತ್ರಿ ಕವಿತಾಗೆ ಹೊಸ ನೋಟಿಸ್ ನೀಡಿದ ಸಿಬಿಐ

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಹಾಗೂ ಟಿಆರ್ ಎಸ್ ಎಂಎಲ್‌ಸಿ ಕೆ ಕವಿತಾ ಅವರಿಗೆ ಸಿಬಿಐ ಹೊಸ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು...

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಹಾಗೂ ಟಿಆರ್ ಎಸ್ ಎಂಎಲ್‌ಸಿ ಕೆ ಕವಿತಾ ಅವರಿಗೆ ಸಿಬಿಐ ಹೊಸ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧಿಸಿದಂತೆ ಡಿಸೆಂಬರ್ 11 ರಂದು ಹೈದರಾಬಾದ್‌ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಕವಿತಾ ಅವರಿಗೆ ಸಿಬಿಐ ಹೊಸ ನೋಟಿಸ್ ಜಾರಿ ಮಾಡಿದೆ.

ಈ ಹಿಂದೆ ಡಿಸೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿತ್ತು. ಆದರೆ ಟಿಆರ್ ಎಸ್ ನಾಯಕಿ ಡಿಸೆಂಬರ್ 11 ರಿಂದ 15ರ ನಡುವೆ ಯಾವುದೇ ದಿನಾಂಕಕ್ಕೆ ತಮ್ಮ ವಿಚಾರಣೆಯನ್ನು ಮುಂದೂಡುವಂತೆ ಸಿಬಿಐಗೆ ಮನವಿ ಮಾಡಿದ್ದರು. ಅದನ್ನು ತನಿಖಾ ಸಂಸ್ಥೆ ಸಮ್ಮತಿಸಿದೆ ಎಂದು ತಿಳಿದುಬಂದಿದೆ.

ಇನ್ನು ಡಿಸೆಂಬರ್ 2 ರಂದು ನೀಡಲಾದ ಮೊದಲ ನೋಟಿಸ್‌ ಪ್ರತಿಕ್ರಿಯಿಸಿದ್ದ ಕವಿತಾ, ಎಫ್‌ಐಆರ್ ಪ್ರತಿ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ದೂರಿನ ವಿಷಯಗಳನ್ನು ಪರಿಶೀಲಿಸಿದ್ದೇನೆ. ಅದರಲ್ಲಿ ಯಾವುದೇ ರೀತಿಯಲ್ಲೂ ಮತ್ತು ಎಲ್ಲಿಯೂ ತನ್ನ ಹೆಸರು ಕಂಡುಬಂದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT