ಆಶಿಶ್ ಮಿಶ್ರಾರನ್ನು ಪೊಲೀಸರು ವಿಚಾರಣೆಗೆ ಕರೆದೊಯ್ಯುತ್ತಿದ್ದ ಸಂದರ್ಭ(ಸಂಗ್ರಹ ಚಿತ್ರ) 
ದೇಶ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಆಶಿಶ್ ಮಿಶ್ರಾ, ಇತರ 13 ಮಂದಿ ವಿರುದ್ಧ ಆರೋಪ ದಾಖಲಿಸಿದ ಕೋರ್ಟ್

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಅಕ್ಟೋಬರ್ 2021 ರಲ್ಲಿ ನಾಲ್ವರು ರೈತರ ಮೇಲೆ ಎಸ್ ಯುವಿ ಕಾರು ಚಲಾಯಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ...

ಲಖನೌ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಅಕ್ಟೋಬರ್ 2021 ರಲ್ಲಿ ನಾಲ್ವರು ರೈತರ ಮೇಲೆ ಎಸ್ ಯುವಿ ಕಾರು ಚಲಾಯಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಮತ್ತು ಇತರ 13 ಜನರ ವಿರುದ್ಧ ಆರೋಪ ಪಟ್ಟಿ ಮಾಡಿದೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.

ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಸುನಿಲ್ ಕುಮಾರ್ ವರ್ಮಾ ಅವರು ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 16ಕ್ಕೆ ನಿಗದಿಪಡಿಸಿದ್ದಾರೆ ಎಂದು ಜಿಲ್ಲಾ ಸರ್ಕಾರಿ ವಕೀಲ(ಕ್ರಿಮಿನಲ್) ಅರವಿಂದ್ ತ್ರಿಪಾಠಿ ಅವರು ಪಿಟಿಐಗೆ ತಿಳಿಸಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 3 ರಂದು, ಆಶಿಶ್ ಮಿಶ್ರಾ ಮಹೀಂದ್ರಾ ಥಾರ್ ಎಸ್‌ಯುವಿಯಲ್ಲಿದ್ದರು ಎಂದು ಹೇಳಲಾಗಿದ್ದು, ಲಖಿಂಪುರ ಖೇರಿಯಲ್ಲಿ ಈಗ ರದ್ದಾಗಿರುವ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ನಾಲ್ವರು ರೈತರು ಮತ್ತು ಪತ್ರಕರ್ತರ ಮೇಲೆ ಕಾರು ಹರಿಸಿದ ಆರೋಪ ಎದುರಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ