ಸರ್ವಪಕ್ಷ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತಿತರರ ಚಿತ್ರ 
ದೇಶ

ಚಳಿಗಾಲದ ಸಂಸತ್ ಅಧಿವೇಶನ: ನಿರುದ್ಯೋಗ, ಬೆಲೆ ಏರಿಕೆ ಕುರಿತು ಚರ್ಚಿಸಲು ಸರ್ವಪಕ್ಷ ಸಭೆಯಲ್ಲಿ ವಿಪಕ್ಷಗಳ ಆಗ್ರಹ

ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ಹಾಗೂ ಲೋಕಸಭೆಯ ಉಪ ನಾಯಕ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಯಿತು.

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ಹಾಗೂ ಲೋಕಸಭೆಯ ಉಪ ನಾಯಕ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಯಿತು.

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಸಚಿವ ಮುರುಳೀಧರನ್ ಮತ್ತು ಅರ್ಜುನ್ ರಾಮ್ ಮೇಘಾವಾಲ್, ಪಿಯೂಸ್ ಗೋಯೆಲ್ ಸರ್ಕಾರದ ಪರವಾಗಿ ಸಭೆಯಲ್ಲಿ ಪಾಲ್ಗೊಂಡರು. ಕಾಂಗ್ರೆಸ್ ಪಕ್ಷದಿಂದ ಅಧೀರ್ ರಂಜನ್ ಚೌಧರಿ, ಟಿಎಂಸಿಯಿಂದ ಸುದೀಪ್ ಬಂಡೋಪಾಧ್ಯಾಯ, ಡೆರಿಕ್ ಓ ಬ್ರಿಯಾನ್, ಡಿಎಂಕೆಯಿಂದ ಟಿಆರ್ ಬಾಲು, ಎನ್ ಸಿಪಿಯ ಡಾ. ಫಾರೂಖ್ ಅಬ್ದುಲ್ಲಾ ಮತ್ತಿತರ ಪಕ್ಷಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ನಿರುದ್ಯೋಗ, ಬೆಲೆ ಏರಿಕೆ, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಶೇ. 10 ರಷ್ಟು ಮೀಸಲಾತಿ ಮತ್ತಿತರ ವಿಚಾರ ಕುರಿತು ಅಧಿವೇಶನದಲ್ಲಿ ಚರ್ಚೆಯಾಗಬೇಕು ಎಂದು ಕಾಂಗ್ರೆಸ್ ಮತ್ತು ಟಿಎಂಸಿ ಮುಖಂಡರು ಒತ್ತಾಯಿಸಿದರು. ಸರ್ಕಾರದಿಂದ ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ, ಬೆಲೆ ಏರಿಕೆ ಕುರಿತು ಕಾಂಗ್ರೆಸ್ ಪ್ರಸ್ತಾಪಿಸಿತು.  

ನಿಯಮಗಳ ಪ್ರಕಾರ, ಎಲ್ಲಾ ವಿಚಾರಗಳ ಕುರಿತು ಚರ್ತಿಸಲು ಸರ್ಕಾರ ಸಿದ್ಧವಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಈ ಬಾರಿಯ ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 7 ರಿಂದ ಆರಂಭವಾಗಲಿದ್ದು, ಡಿಸೆಂಬರ್ 29ರವರೆಗೂ ಮುಂದುವರೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT