ಉದ್ಧವ್ ಠಾಕ್ರೆ 
ದೇಶ

ಕೆಎಸ್ಆರ್ ಟಿಸಿ ಬಸ್ ಗಳ ಮೇಲೆ 'ಜೈ ಮಹಾರಾಷ್ಟ್ರ' ಎಂದು ಬರೆದ ಶಿವಸೇನಾ ಕಾರ್ಯಕರ್ತರು

ಮಹಾರಾಷ್ಟ್ರ - ಕರ್ನಾಟಕ ಗಡಿ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣದ ಕಾರ್ಯಕರ್ತರು ಮಂಗಳವಾರ ಪುಣೆ ನಗರದ ಸ್ವರ್ಗೇಟ್ ಪ್ರದೇಶದಲ್ಲಿ ಕನಿಷ್ಠ ಮೂರು ಕರ್ನಾಟಕ ರಾಜ್ಯ ಸಾರಿಗೆ ಬಸ್‌ಗಳಿಗೆ...

ಪುಣೆ: ಮಹಾರಾಷ್ಟ್ರ - ಕರ್ನಾಟಕ ಗಡಿ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣದ ಕಾರ್ಯಕರ್ತರು ಮಂಗಳವಾರ ಪುಣೆ ನಗರದ ಸ್ವರ್ಗೇಟ್ ಪ್ರದೇಶದಲ್ಲಿ ಕನಿಷ್ಠ ಮೂರು ಕರ್ನಾಟಕ ರಾಜ್ಯ ಸಾರಿಗೆ ಬಸ್‌ಗಳಿಗೆ ಕಪ್ಪು ಮಸಿ ಮತ್ತು ಕಿತ್ತಳೆ ಬಣ್ಣ ಬಳಿದಿದ್ದಾರೆ.
                   
ಶಿವಸೇನಾ ಕಾರ್ಯಕರ್ತರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಕನಿಷ್ಠ ಎರಡು-ಮೂರು ಬಸ್‌ಗಳಿಗೆ ಕಪ್ಪು ಬಣ್ಣ ಎರಚಿದ್ದಾರೆ. ಅವರು ಕಿತ್ತಳೆ ಸ್ಪ್ರೇ ಬಳಸಿ ಈ ಬಸ್‌ಗಳ ಮೇಲೆ "ಜೈ ಮಹಾರಾಷ್ಟ್ರ" ಎಂದು ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ಗಡಿ ವಿವಾದ: ಬೆಳಗಾವಿಯಲ್ಲಿ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ, ಕಪ್ಪು ಮಸಿ ಬಳಿದು ಆಕ್ರೋಶ
                
ಬಸ್‌ಗಳಿಗೆ ಬಣ್ಣ ಬಳಿದ ನಾಲ್ಕೈದು ಮಂದಿಯನ್ನು ಬಂಧಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದಕ್ಕು ಮುನ್ನ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ, ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದರು.

ಮಹಾರಾಷ್ಟ್ರದ ಗಡಿ ಕ್ಯಾತೆ ಈಗ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟು ಮಾಡಿದೆ. ಮಹಾರಾಷ್ಟ್ರ ನಾಯಕರು ನೀಡಿದ್ದ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಮಂಗಳವಾರ ನಡೆಸಲು ಉದ್ದೇಶಿಸಿರುವ ಬೃಹತ್ ಬಹಿರಂಗ ಸಭೆಯನ್ನು ನಿಷೇಧಿಸಲಾಗಿದೆ. ಇದರ ಜೊತೆಗೆ ಕರವೇ ನಾಯಕರ ಬೆಳಗಾವಿ ನಗರ ಪ್ರವೇಶಕ್ಕೂ ತಡೆಯೊಡ್ಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT