ಶರದ್ ಪವಾರ್ 
ದೇಶ

ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪರಿಸ್ಥಿತಿ ಚಿಂತಾಜನಕ; ನಿರ್ಣಯ ಕೈಗೊಳ್ಳುವ ಸಮಯ ಬಂದಿದೆ: ಶರದ್ ಪವಾರ್

ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿಕ್ಯಾತೆ ಉಲ್ಬಣಗೊಂಡಿರುವ ಹೊತ್ತಿನಲ್ಲೇ ಮಹಾರಾಷ್ಟ್ರದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಗಡಿಯಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

ಮುಂಬೈ: ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿಕ್ಯಾತೆ ಉಲ್ಬಣಗೊಂಡಿರುವ ಹೊತ್ತಿನಲ್ಲೇ ಮಹಾರಾಷ್ಟ್ರದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಗಡಿಯಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ಪ್ರದೇಶಗಳಲ್ಲಿನ ಪರಿಸ್ಥಿತಿ ಕುರಿತು ಮಾತನಾಡಿದ್ದು, ಗಡಿಯಲ್ಲಿ ಪರಿಸ್ಥಿತಿ "ಚಿಂತಾಜನಕ"ವಾಗಿದ್ದು, ಅಲ್ಲಿ ಏನಾಗುತ್ತಿದೆ ಎಂಬುದನ್ನು ನೋಡಿದ ನಂತರ ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಹೇಳಿದರು.

ಕರ್ನಾಟಕದೊಂದಿಗೆ ರಾಜ್ಯದ ಗಡಿ ವಿವಾದವನ್ನು ಸಮನ್ವಯಗೊಳಿಸಲು ನೇಮಕಗೊಂಡಿರುವ ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರು ಮಂಗಳವಾರ ದಕ್ಷಿಣ ರಾಜ್ಯದ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಾರ್ಯಕರ್ತರನ್ನು ಭೇಟಿ ಮಾಡಿ ದಶಕಗಳ ಹಿಂದಿನ ಗಡಿ ಸಮಸ್ಯೆಯ ಕುರಿತು ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ ಬೆಳಗಾವಿಗೆ ಬಂದರೆ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂಬ ರಾಜ್ಯಸರ್ಕಾರದ ಎಚ್ಚರಿಕೆ ಬಳಿಕ ಸಚಿವರು ತಮ್ಮ ಭೇಟಿಯನ್ನು ಮುಂದೂಡಿದ್ದಾರೆ ಎನ್ನಲಾಗಿದೆ. 

ಅಲ್ಲದೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ತಮ್ಮ ಸಂಪುಟ ಸಹೋದ್ಯೋಗಿಗಳನ್ನು ಬೆಳಗಾವಿಗೆ ಕಳುಹಿಸದಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಕೇಳಿಕೊಳ್ಳುವುದಾಗಿ ಹೇಳಿದ್ದಾರೆ, ಏಕೆಂದರೆ ಅವರ ಭೇಟಿಯಿಂದ ಗಡಿ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಯಾಗಬಹುದು ಎಂದು ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ಮಹಾರಾಷ್ಟ್ರದೊಂದಿಗಿನ ಗಡಿ ವಿವಾದ ಇತ್ಯರ್ಥವಾಗಿದೆ ಎಂದು ಪ್ರತಿಪಾದಿಸಿದ ಸಿಎಂ, ಸಚಿವರು ಭೇಟಿಗೆ ಮುಂದಾದರೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಯಾವುದೇ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಹೇಳಿದರು.

ಏತನ್ಮಧ್ಯೆ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎನ್ ಸಿಪಿ ಮುಖ್ಯಸ್ಥ ಪವಾರ್, ಕಳೆದ ಕೆಲವು ವಾರಗಳಿಂದ ಕರ್ನಾಟಕದ ಸಿಎಂ ಬೊಮ್ಮಾಯಿ ಪರಿಸ್ಥಿತಿಯನ್ನು ಬೇರೆ ದಿಕ್ಕಿಗೆ ಕೊಂಡೊಯ್ಯಲು ಪ್ರಜ್ಞಾಪೂರ್ವಕ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಗಡಿ ಪ್ರದೇಶಗಳಲ್ಲಿ ಏನಾಗುತ್ತಿದೆ ಎಂಬುದನ್ನು ನೋಡಿದ ನಂತರ ನಿಲುವು ತೆಗೆದುಕೊಳ್ಳುವ ಸಮಯ ಬಂದಿದೆ. ಅಲ್ಲಿನ ಪರಿಸ್ಥಿತಿ ಚಿಂತಾಜನಕವಾಗಿದೆ" ಎಂದು ಪವಾರ್ ಹೇಳಿದ್ದಾರೆ. 

ಮಹಾರಾಷ್ಟ್ರವು 1960 ರಲ್ಲಿ ಪ್ರಾರಂಭವಾದಾಗಿನಿಂದ, ಬೆಳಗಾವಿ ಜಿಲ್ಲೆ ಮತ್ತು ದಕ್ಷಿಣ ರಾಜ್ಯದ ನಿಯಂತ್ರಣದಲ್ಲಿರುವ ಇತರ 80 ಮರಾಠಿ ಮಾತನಾಡುವ ಹಳ್ಳಿಗಳ ಸ್ಥಾನಮಾನದ ಕುರಿತು ಕರ್ನಾಟಕದೊಂದಿಗೆ ವಿವಾದದಲ್ಲಿ ಸಿಲುಕಿಕೊಂಡಿದೆ. ವಿವಾದ ಸುಪ್ರೀಂ ಕೋರ್ಟ್‌ನಲ್ಲಿದ್ದು ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಮತ್ತೆ ಗಡಿ ವಿವಾದ ಭುಗಿಲೆದ್ದಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT