ಪ್ರಾತಿನಿಧಿಕ ಚಿತ್ರ 
ದೇಶ

ಬೀದಿ ನಾಯಿಗಳ ಹತ್ಯೆ: ಪಂಚಾಯಿತಿ ಅಧ್ಯಕ್ಷೆ, ಪತಿ ವಿರುದ್ಧ ಪ್ರಕರಣ ದಾಖಲಿಸಿದ ತಮಿಳುನಾಡು ಪೊಲೀಸರು

ಬೀದಿನಾಯಿಗಳನ್ನು ಕೊಂದ ಆರೋಪದ ಮೇಲೆ ತಮಿಳುನಾಡಿನ ವಿರುದುನಗರ ಪೊಲೀಸರು ಶಂಕರಲಿಂಗಪುರದ ಪಂಚಾಯಿತಿ ಅಧ್ಯಕ್ಷೆ ಮತ್ತು ಆಕೆಯ ಪತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಚೆನ್ನೈ: ಬೀದಿನಾಯಿಗಳನ್ನು ಕೊಂದ ಆರೋಪದ ಮೇಲೆ ತಮಿಳುನಾಡಿನ ವಿರುದುನಗರ ಪೊಲೀಸರು ಶಂಕರಲಿಂಗಪುರದ ಪಂಚಾಯಿತಿ ಅಧ್ಯಕ್ಷೆ ಮತ್ತು ಆಕೆಯ ಪತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ಪ್ರದೇಶದಲ್ಲಿ ಸುಮಾರು 50 ಬೀದಿ ನಾಯಿಗಳನ್ನು ಕೊಂದು ಹೂತು ಹಾಕಲಾಗಿದೆ ಎಂದು ಪ್ರಾಣಿ ಕಾರ್ಯಕರ್ತೆಯೊಬ್ಬರು ಅಮಟೂರು ಪೊಲೀಸರಿಗೆ ದೂರು ನೀಡಿದ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮೇನಕಾ ಗಾಂಧಿ ಸ್ಥಾಪಿಸಿದ ಪ್ರಾಣಿ ಹಕ್ಕುಗಳ ಸಂಘಟನೆಯಾದ ಪೀಪಲ್ ಫಾರ್ ಅನಿಮಲ್ಸ್ (ಪಿಎಫ್‌ಎ) ಸದಸ್ಯೆಯಾಗಿರುವ ಸಿ. ಸುನಿತಾ ಎಂಬುವವರು 50 ನಾಯಿಗಳನ್ನು ಕೊಂದು ಹೂಳಲಾಗಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಾಯಿತಿ ಅಧ್ಯಕ್ಷೆ ನಾಗಲಕ್ಷ್ಮಿ ಮತ್ತು ಅವರ ಪತಿ ಮೀನಾಚಿ ಸುಂದರಂ ಅವರು ನಾಯಿಗಳನ್ನು ಕೊಂದಿದ್ದಾರೆ ಎಂಬುದಕ್ಕೆ ಪುರಾವೆ ಸಿಕ್ಕಿದ ಮೇಲೆ ನಾನು ಅವರಿಗೆ ಕರೆ ಮಾಡಿದ್ದೇನೆ. ಸುಂದರಂ ಅವರು ನಾಯಿಗಳನ್ನು ಕೊಂದಿರುವುದಾಗಿ ಖಚಿತಪಡಿಸಿದ್ದಾರೆ ಎಂದರು.

30 ನಾಯಿಗಳ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಮಟೂರು ಪೊಲೀಸರು ಪಂಚಾಯಿತಿ ಅಧ್ಯಕ್ಷೆ ಮತ್ತು ಆಕೆಯ ಪತಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಕಬ್ಬಿಣದ ಕೊಕ್ಕೆಗಳನ್ನು ಬಳಸಿ ನಾಯಿಗಳನ್ನು ಹಿಡಿದು ನಂತರ ಹೊಡೆದು ಸಾಯಿಸಲಾಗಿದೆ ಎಂದು ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಸುದ್ದಿಸಂಸ್ಥೆ ಐಎಎನ್ಎಸ್‌ಗೆ ತಿಳಿಸಿದ್ದಾರೆ.

ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ 1960ರ ಅಡಿಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹಗಳು ಹೆಚ್ಚು ಕೊಳೆತ ಸ್ಥಿತಿಯಲ್ಲಿರುವುದರಿಂದ ಹೆಚ್ಚಿನವುಗಳ ಶವಪರೀಕ್ಷೆ ನಡೆಸಲಾಗಲಿಲ್ಲ. ಆದರೆ, ಕೆಲವು ನಾಯಿಗಳಿಗೆ ಇದನ್ನು ಮಾಡಲಾಯಿತು ಮತ್ತು ನಾಯಿಗಳನ್ನು ಹೊಡೆದು ಸಾಯಿಸಲಾಗಿದೆ ಎಂದು ಕಂಡುಬಂದಿದೆ ಎಂದು ಅಮಟೂರು ಪೊಲೀಸ್ ಠಾಣೆಯ ಅಧಿಕಾರಿಗಳು ಐಎಎನ್‌ಎಸ್‌ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT