ಎಎಪಿ ಕಾರ್ಯಕರ್ತರ ಸಂಭ್ರಮ 
ದೇಶ

MCD ಚುನಾವಣಾ ಫಲಿತಾಂಶ: ಚಂಡೀಗಢ ಆಯ್ತು, ಈಗ ದೆಹಲಿಯ ಸರದಿ; ಮೇಯರ್ ಆಯ್ಕೆ ಬಗ್ಗೆ ಸಂಚಲನ ಮೂಡಿಸಿದ ಬಿಜೆಪಿ ಟ್ವೀಟ್!

ಫಲಿತಾಂಶ ಬಂದಾಯ್ತು. ಇದೀಗ ದೆಹಲಿಯ ಮೇಯರ್ ಆಯ್ಕೆ ಸರದಿ. ಈಗ ನಿಕಟ ಸ್ಪರ್ಧೆಯಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದನ್ನು ನೋಡಬೇಕು ಎಂದು ಬಿಜೆಪಿಯ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದು ತೀವ್ರ ಕುತೂಹಲ ಮೂಡಿಸಿದೆ.

ನವದೆಹಲಿ: MCD ಚುನಾವಣೆ 2022ರ ಫಲಿತಾಂಶ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದ್ದರೆ, ಭಾರತೀಯ ಜನತಾ ಪಕ್ಷದ ಕಾರ್ಯಕರ್ತರಲ್ಲಿ ಸ್ವಲ್ಪ ನಿರಾಶೆ ಮೂಡಿಸಿದೆ. ಆದರೆ ಇದೀಗ ದೆಹಲಿಯ ಮೇಯರ್ ಆಯ್ಕೆ ಸರದಿ. ಈಗ ನಿಕಟ ಸ್ಪರ್ಧೆಯಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದನ್ನು ನೋಡಬೇಕು ಎಂದು ಬಿಜೆಪಿಯ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದು ತೀವ್ರ ಕುತೂಹಲ ಮೂಡಿಸಿದೆ.

ಅಮಿತ್ ಮಾಳವಿಯಾ ಅವರು ದೆಹಲಿ ಮೇಯರ್ ಸ್ಥಾನಕ್ಕಾಗಿ ಬಿಜೆಪಿ ಇನ್ನೂ ಕಾದುನೋಡುತ್ತಿದೆ. ಇನ್ನು ಕೌನ್ಸಿಲರ್‌ಗಳು ಮೇಯರ್ ಯಾರಾಗಬೇಕು ಎಂಬುದನ್ನು ನಿರ್ಧರಿಸುತ್ತಾರೆ ಎಂದು ಉದಾಹರಣೆ ನೀಡಿದ ಅವರು, ಬಿಜೆಪಿ ಉತ್ತಮ ಸ್ಥಿತಿಯಲ್ಲಿಲ್ಲದಿದ್ದರೂ ಚಂಡೀಗಢಕ್ಕೆ ಬಿಜೆಪಿ ಮೇಯರ್ ಇದ್ದಾರೆ ಎಂದು ಹೇಳಿದರು.

ಅಮಿತ್ ಮಾಳವೀಯ ಅವರು, ಚುನಾಯಿತ ಕೌನ್ಸಿಲರ್‌ಗಳು ಯಾವ ಪಕ್ಷದ ಮೇಯರ್‌ಗೆ ಮತ ಹಾಕುತ್ತಾರೆ ಎಂಬುದು ಮುಖ್ಯ. ಚಂಡೀಗಢದಲ್ಲಿ ಬಿಜೆಪಿ ಮೇಯರ್ ಆಗಿದ್ದಾರೆ ಎಂದು ತಮ್ಮ ಟ್ವೀಟ್ ನಲ್ಲಿ ಹೇಳುವ ಮೂಲಕ ದೆಹಲಿಯ ರಾಜಕೀಯ ಕಾರಿಡಾರ್ ನಲ್ಲಿ ಸಂಚಲನ ಮೂಡಿಸಿದ್ದಾರೆ. ಇದಲ್ಲದೇ ಅಮಿತ್ ಮಾಳವೀಯ ಅವರು ಕೇಜ್ರಿವಾಲ್ ಅವರನ್ನು ಇತರ ಟ್ವೀಟ್‌ಗಳಲ್ಲಿ ತೀವ್ರವಾಗಿ ಟೀಕಿಸಿದ್ದಾರೆ.

ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷದ ಕೌನ್ಸಿಲರ್‌ಗಳ ಸಂಖ್ಯೆ ಕಡಿಮೆಯಿದ್ದರೂ, ಕೌನ್ಸಿಲರ್‌ಗಳು ಬಿಜೆಪಿಯ ಮೇಯರ್ ಅನ್ನು ಆಯ್ಕೆ ಮಾಡಿದ್ದಾರೆ. ವಾಸ್ತವವಾಗಿ, ಚಂಡೀಗಢದ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ 35 ವಾರ್ಡ್‌ಗಳಿಗೆ ಚುನಾವಣೆಗಳು ನಡೆದಿದ್ದವು. ಇದರಲ್ಲಿ ಆಮ್ ಆದ್ಮಿ ಪಕ್ಷವು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಈ ಚುನಾವಣೆಯಲ್ಲಿ ಎಎಪಿ 14, ಬಿಜೆಪಿ 12 ಮತ್ತು ಕಾಂಗ್ರೆಸ್ 8 ಸ್ಥಾನಗಳನ್ನು ಪಡೆದಿತ್ತು.

ಇದಾದ ಬಳಿಕ ಕಾಂಗ್ರೆಸ್‌ನ ಕೌನ್ಸಿಲರ್‌ ಗಳು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಗಮನಾರ್ಹವೆಂದರೆ ಸಂಸದರು ನೀಡಿದ ಒಂದು ಮತ ಈಗಾಗಲೇ ಬಿಜೆಪಿ ಖಾತೆಯಲ್ಲಿತ್ತು. ಈ ಮೂಲಕ ಎಎಪಿ ಮತ್ತು ಬಿಜೆಪಿ 14-14 ಮತಗಳನ್ನು ಪಡೆದಿವೆ. ಅಂತಿಮವಾಗಿ ಬಿಜೆಪಿಯಿಂದ ಮೇಯರ್ ಆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT