ಎಎಪಿ ನಾಯಕರು 
ದೇಶ

ಎಂಸಿಡಿ ಚುನಾವಣೆ ಫಲಿತಾಂಶ ಪ್ರಕಟ: ಎಎಪಿಗೆ 134, ಬಿಜೆಪಿ 104, ಕಾಂಗ್ರೆಸ್ ಗೆ 9 ಸ್ಥಾನ

ದೆಹಲಿ ಮಹಾನಗರ ಪಾಲಿಕೆ(ಎಂಸಿಡಿ) ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಮೊದಲ ಬಾರಿಗೆ  ಅಧಿಕಾರದ ಗದ್ದುಗೆ ಏರಿಲಿದೆ.

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ(ಎಂಸಿಡಿ) ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಮೊದಲ ಬಾರಿಗೆ  ಅಧಿಕಾರದ ಗದ್ದುಗೆ ಏರಿಲಿದೆ. ಈ ಮೂಲಕ 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯಗೊಂಡಿದೆ.

ತೀವ್ರ ಕುತೂಹಲ ಕೆರೆಳಿಸಿದ್ದ ಎಂಸಿಡಿ ಚುನಾವಣೆಯಲ್ಲಿ ಬಿಜೆಪಿ ಪೈಪೋಟಿಯ ಹೊರತಾಗಿಯೂ ದೆಹಲಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಆಮ್ ಆದ್ಮಿ ಪಕ್ಷ ಯಶಸ್ವಿಯಾಗಿದೆ.

ಎಂಸಿಡಿಯ ಎಲ್ಲಾ 250 ವಾರ್ಡ್‌ಗಳ ಫಲಿತಾಂಶ ಪ್ರಕಟಿಸಲಾಗಿದ್ದು,  ಎಎಪಿ 134 ಸ್ಥಾನ ಪಡೆಯುವ ಮೂಲಕ ಸ್ಪಷ್ಟ ಬಹುಮತ ಗಳಿಸಿದರೆ, ಬಿಜೆಪಿ 104 ಸ್ಥಾನ ಗಳಿಸಿದೆ. ಇನ್ನು ಕಾಂಗ್ರೆಸ್ ಕೇವಲ ಒಂಬತ್ತು ವಾರ್ಡ್‌ಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಈಶಾನ್ಯ ದೆಹಲಿಯ ಸೀಲಾಂಪುರದಿಂದ ಶಕೀಲಾ ಬೇಗಂ ಸೇರಿದಂತೆ ಮೂವರು ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದಾರೆ.

ದೆಹಲಿಯ 250 ವಾರ್ಡ್ ಗಳ ಪೈಕಿ ಆಮ್ ಆದ್ಮಿ ಪಕ್ಷ 134 ವಾರ್ಡ್ ಗಳಲ್ಲಿ ಜಯಭೇರಿ ಭಾರಿಸಿದ್ದು, ಬಹುಮತಕ್ಕೆ ಅಗತ್ಯವಿರುವ 126 ಸ್ಥಾನಗಳನ್ನು ಮೀರಿ ಇನ್ನೂ 8 ಹೆಚ್ಚುವರಿ ಸ್ಥಾನಗಳೊಂದಿಗೆ ಆಪ್ ಅಧಿಕಾರದ ಗದ್ದುಗೆ ಹಿಡಿಯಲಿದೆ.

ತಮ್ಮ ಪಕ್ಷಕ್ಕೆ ಭರ್ಜರಿ ಬಹುಮತ ನೀಡಿದ ದೆಹಲಿ ಜನತೆಗೆ ಧನ್ಯವಾದ ಹೇಳಿದೆ ಅರವಿಂದ್ ಕೇಜ್ರಿವಾಲ್ ಅವರು, ಕೇಂದ್ರಾಡಳಿತ ಪ್ರದೇಶದಲ್ಲಿ ನಾಗರಿಕ ಸೌಕರ್ಯಗಳನ್ನು ಸುಧಾರಿಸಲು ಬಿಜೆಪಿ ಮತ್ತು ಕಾಂಗ್ರೆಸ್‌ನ ಸಹಕಾರ, ಕೇಂದ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ "ಆಶೀರ್ವಾದ" ಕೋರಿದ್ದಾರೆ.

"ನಾವೆಲ್ಲರೂ ದೆಹಲಿಯ ಸ್ಥಿತಿಯನ್ನು ಸುಧಾರಿಸಬೇಕಾಗಿದೆ. ಹೀಗಾಗಿ ನನಗೆ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ಎಲ್ಲರ ಸಹಕಾರ ಬೇಕು. ನಮಗೆ ಎಲ್ಲರ ಸಹಕಾರ ಬೇಕು, ವಿಶೇಷವಾಗಿ ಕೇಂದ್ರ ಮತ್ತು ಪ್ರಧಾನಿ ಮೋದಿಯ ಸಹಾಯ ಮತ್ತು ಆಶೀರ್ವಾದದ ಅಗತ್ಯವಿದೆ" ಎಂದು ಕೇಜ್ರಿವಾಲ್ ಅವರು ತಮ್ಮ ವಿಜಯೋತ್ಸವ ಭಾಷಣದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT