ಸಾಂದರ್ಭಿಕ ಚಿತ್ರ 
ದೇಶ

ಕೈಗಾರಿಕಾ ವಿವಾದ ಕಾಯ್ದೆಯಂತೆ ಉದ್ಯೋಗಿಗಳನ್ನು ವಜಾಗೊಳಿಸಬೇಕು, ಇಲ್ಲದಿದ್ದರೆ ಅದು ಕಾನೂನು ಬಾಹಿರ: ಕೇಂದ್ರ ಕಾರ್ಮಿಕ ಸಚಿವ

ಯಾವುದೇ ಹಿಂಬಡ್ತಿ ಮತ್ತು ವಜಾಗೊಳಿಸುವಿಕೆಯನ್ನು ಕೈಗಾರಿಕಾ ವಿವಾದಗಳ ಕಾಯ್ದೆಯ ನಿಬಂಧನೆಗಳ ಪ್ರಕಾರ ಕೈಗೊಳ್ಳಬೇಕು, ಇಲ್ಲದಿದ್ದರೆ ಅದನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ್ ಯಾದವ್ ಗುರುವಾರ ಹೇಳಿದ್ದಾರೆ. 

ನವದೆಹಲಿ: ಐಟಿ ವಲಯ ಸೇರಿದಂತೆ ಹಲವಾರು ಸಂಸ್ಥೆಗಳಲ್ಲಿ ಕೆಲಸಗಾರರನ್ನು ಸಾಮೂಹಿಕವಾಗಿ ವಜಾಗೊಳಿಸುತ್ತಿರುವ ವರದಿಗಳ ನಡುವೆ, ಯಾವುದೇ ಹಿಂಬಡ್ತಿ ಮತ್ತು ವಜಾಗೊಳಿಸುವಿಕೆಯನ್ನು ಕೈಗಾರಿಕಾ ವಿವಾದಗಳ ಕಾಯ್ದೆಯ ನಿಬಂಧನೆಗಳ ಪ್ರಕಾರ ಕೈಗೊಳ್ಳಬೇಕು, ಇಲ್ಲದಿದ್ದರೆ ಅದನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ್ ಯಾದವ್ ಗುರುವಾರ ಹೇಳಿದ್ದಾರೆ. 

ಕೈಗಾರಿಕೆಗಳಲ್ಲಿ ಕೆಲಸಗಾರರ ವಜಾಗೊಳಿಸುವಿಕೆ ಮತ್ತು ಹಿಂಬಡ್ತಿಗೆ ಸಂಬಂಧಿಸಿದ ವಿಷಯಗಳು ಕೈಗಾರಿಕಾ ವಿವಾದಗಳ ಕಾಯ್ದೆ1947 (ಐಡಿ ಆಕ್ಟ್) ನಿಬಂಧನೆಗಳ ಮೂಲಕ ನಿರ್ವಹಿಸಲ್ಪಡುತ್ತವೆ, ಇದು ವಜಾಗೊಳಿಸುವಿಕೆಯ ವಿವಿಧ ಅಂಶಗಳನ್ನು ಮತ್ತು ಕಾರ್ಮಿಕರ ಹಿಂಬಡ್ತಿಗೆ ಪೂರ್ವಭಾವಿ ಷರತ್ತುಗಳನ್ನು ನಿಯಂತ್ರಿಸುತ್ತದೆ ಎಂದು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಯಾದವ್ ಉತ್ತರಿಸಿದರು. 

ಐಡಿ ಕಾಯ್ದೆ ಪ್ರಕಾರ 100 ಅಥವಾ ಅದಕ್ಕಿಂತ ಹೆಚ್ಚು ಉದ್ಯೋಗಿಗಳಿರುವ ಸಂಸ್ಥೆಗಳು ಕೆಲಸಗಾರರನ್ನು ತೆಗೆಯುವ, ಅಥವಾ ವಜಾಗೊಳಿಸುವ ಮುನ್ನ ಸಂಬಂಧಿಸಿದ ಸರ್ಕಾರದ ಅನುಮತಿಯನ್ನು ಕೋರಬೇಕು. ಒಂದು ವೇಳೆ ಕೈಗಾರಿಕಾ ವಿವಾದ ಕಾಯ್ದೆ ನಿಬಂಧನೆಗಳ ಅನುಸಾರ ವಜಾಗೊಳಿಸದಿದ್ದರೆ ಅದನ್ನು ಕಾನೂನು ಬಾಹಿರ ಎಂದು ಪರಿಗಣಿಸಲಾಗುವುದು ಎಂದು ಅವರು ತಿಳಿಸಿದರು.

 ಈ ಕಾಯ್ದೆಯ ವಿನಾಯಿತಿಯಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೆಲಸಗಾರರ ಹಿತಾಸಕ್ತಿ ಕಾಪಾಡಲು, ಅವರ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬಹುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT