ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್ ಚುನಾವಣೆ: 45 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್, ಆ ಪೈಕಿ 43 ಜನ ಗೆಲುವು

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಿರುವ ಆಡಳಿತರೂಢ ಬಿಜೆಪಿ, ಹಾಲಿ ಶಾಸಕರನ್ನು ಕೈಬಿಟ್ಟು 45 ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆ ಪೈಕಿ ಇಬ್ಬರನ್ನು ಹೊರತುಪಡಿಸಿ ಉಳಿದವರೆಲ್ಲ ಜಯಭೇರಿ ಬಾರಿಸಿದ್ದಾರೆ.

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಿರುವ ಆಡಳಿತರೂಢ ಬಿಜೆಪಿ, ಹಾಲಿ ಶಾಸಕರನ್ನು ಕೈಬಿಟ್ಟು 45 ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆ ಪೈಕಿ ಇಬ್ಬರನ್ನು ಹೊರತುಪಡಿಸಿ ಉಳಿದವರೆಲ್ಲ ಜಯಭೇರಿ ಬಾರಿಸಿದ್ದಾರೆ.
          
ಆಡಳಿತ ವಿರೋಧಿ ಅಲೆ ಅಳಿಸಿ ಹಾಕಲು ಆಡಳಿತ ಪಕ್ಷ ಬಿಜೆಪಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 45 ಶಾಸಕರಿಗೆ ಟಿಕೆಟ್ ನಿರಾಕರಿಸಿತ್ತು. 45 ಹೊಸ ಮುಖಗಳ ಪೈಕಿ 43 ಜನ ಗೆಲುವು ಸಾಧಿಸಿದ್ದಾರೆ. ಹೆಚ್ಚು ಹೊಸ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದಿದ್ದರಿಂದ ಬಿಜೆಪಿ ತಂತ್ರ ಫಲ ನೀಡಿದೆ.

ಇದನ್ನು ಓದಿ: ಬಿಎಂಸಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮತ 'ತಿನ್ನಲು' ಎಎಪಿ ಸ್ಪರ್ಧಿಸಬೇಕು: ಮಹಾ ಬಿಜೆಪಿ
        
ಬೊಟಾಡ್ ಮತ್ತು ವಘೋಡಿಯಾದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಹೊಸ ಅಭ್ಯರ್ಥಿಗಳು ಆಮ್ ಆದ್ಮಿ ಪಕ್ಷ ಮತ್ತು ಪಕ್ಷೇತರ ಅಭ್ಯರ್ಥಿ ವಿರುದ್ಧ ಸೋಲು ಅನುಭವಿಸಿದ್ದಾರೆ.
       
ಬೊಟಾಡ್‌ನಲ್ಲಿ ಬಿಜೆಪಿ ಹಾಲಿ ಶಾಸಕ ಹಾಗೂ ಮಾಜಿ ಇಂಧನ ಸಚಿವ ಸೌರಭ್ ಪಟೇಲ್ ಅವರನ್ನು ಕೈಬಿಟ್ಟು ಘನಶ್ಯಾಮ್ ವಿರಾನಿ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ ವಿರಾನಿ ಅವರು ಎಎಪಿಯ ಉಮೇಶ್ ಮಕ್ವಾನಾ ವಿರುದ್ಧ 2,779 ಮತಗಳ ಕಡಿಮೆ ಅಂತರದಿಂದ ಸೋಲು ಅನುಭವಿಸಿದ್ದಾರೆ.
        
ವಡೋದರಾ ಜಿಲ್ಲೆಯ ವಘೋಡಿಯಾ ಕ್ಷೇತ್ರದಲ್ಲಿ ಹಾಲಿ ಶಾಸಕ ಮಧು ಶ್ರೀವಾಸ್ತವ್ ಬದಲಿಗೆ ಅಶ್ವಿನ್ ಪಟೇಲ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿತ್ತು. ಆರು ಬಾರಿ ಶಾಸಕರಾಗಿದ್ದ ಶ್ರೀವಾಸ್ತವ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT