ಶುಕ್ರವಾರ ರಾತ್ರಿ ಸುರಿದ ಮಳೆಗೆ ರಾಯಪೆಟ್ಟಾದ ರಸ್ತೆಯಲ್ಲಿ ಜಲಾವೃತ್ತಗೊಂಡಿರುವುದು. 
ದೇಶ

ಮಾಂಡೌಸ್ ಚಂಡಮಾರುತದ ಅಬ್ಬರ: ತಮಿಳುನಾಡು, ಪಾಂಡಿಚೆರಿಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

'ಮಾಂಡೌಸ್' ಚಂಡಮಾರುತದ ಅಬ್ಬರ ಗುರುವಾರ ತೀವ್ರಗೊಂಡಿದ್ದು, ತಮಿಳುನಾಡಿನ ಉತ್ತರ ಕರಾವಳಿ ಮತ್ತು ಆಂತರಿಕ ಜಿಲ್ಲೆಗಳು ಮತ್ತು ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಡಿಸೆಂಬರ್ 9 ಮತ್ತು 10 ರಂದು (ಶುಕ್ರವಾರ ಮತ್ತು ಶನಿವಾರ) ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.

ಚೆನ್ನೈ: 'ಮಾಂಡೌಸ್' ಚಂಡಮಾರುತದ ಅಬ್ಬರ ಗುರುವಾರ ತೀವ್ರಗೊಂಡಿದ್ದು, ತಮಿಳುನಾಡಿನ ಉತ್ತರ ಕರಾವಳಿ ಮತ್ತು ಆಂತರಿಕ ಜಿಲ್ಲೆಗಳು ಮತ್ತು ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಡಿಸೆಂಬರ್ 9 ಮತ್ತು 10 ರಂದು (ಶುಕ್ರವಾರ ಮತ್ತು ಶನಿವಾರ) ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.

ಮಾಂಡೌಸ್ ಚಂಡಮಾರುತ ಹಿನ್ನೆಲೆಯಲ್ಲಿ ಚೆನ್ನೈ, ಚೆಂಗಲ್ಪಟ್ಟು, ವಿಲ್ಲುಪುರಂ, ತಿರುವಳ್ಳೂರು, ವೆಲ್ಲೂರು, ಕಡಲೂರು, ರಾಣಿಪೇಟ್, ಕಾಂಚೀಪುರಂ, ಕಲ್ಲಕುರಿಚಿ, ತಂಜಾವೂರು, ತಿರುವರೂರು, ಮೈಲಾಡುತುರೈ, ನಾಗಪಟ್ಟಣಂ, ಅರಿಯಲೂರ್, ಪೆರಂಬಲೂರು, ಪುದುಮೂರು, ಧರ್ಮಪುರ, ಪುದು ಸೇರಿ 19 ಜಿಲ್ಲೆಗಳಲ್ಲಿ ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ತಮಿಳುನಾಡಿನ ನಾಮಕ್ಕಲ್ ಮತ್ತು ಕಾರೈಕಲ್ ಮತ್ತು ಪುದುಚೇರಿಯಲ್ಲಿ ಶುಕ್ರವಾರ ಮತ್ತು ಶನಿವಾರದಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾರೈಕಾಲ್‌ನ ಪೂರ್ವ-ಆಗ್ನೇಯಕ್ಕೆ 350 ಕಿಮೀ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಚೆನ್ನೈನಿಂದ ಸುಮಾರು 440 ಕಿಮೀ ಆಗ್ನೇಯದಲ್ಲಿ ಕೇಂದ್ರೀಕೃತವಾಗಿರುವ ಚಂಡಮಾರುತವು, ಶುಕ್ರವಾರ ಬೆಳಗಿನವರೆಗೆ ತನ್ನ ತೀವ್ರತೆಯನ್ನು ಕಾಯ್ದುಕೊಂಡು ನಂತರ ಮುಂಜಾನೆ ಚಂಡಮಾರುತವಾಗಿ ದುರ್ಬಲಗೊಳ್ಳುವ ಸಾಧ್ಯತೆಯಿದೆ ಎಂದು ಐಎಂಡಿ ಮಾಹಿತಿ ನೀಡಿದೆ.

ಚಂಡಮಾರುತವು ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸುವುದನ್ನು ಮುಂದುವರೆಸಲಿದ್ದು, ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ, ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವೆ ಮಹಾಬಲಿಪುರಂ ಸುತ್ತಲೂ 65-75 ಕಿ.ಮೀ ವೇಗದಲ್ಲಿ ಗಂಟೆಗೆ 85 ಕಿ.ಮೀ ವೇಗದಲ್ಲಿ ಶುಕ್ರವಾರ ಮಧ್ಯರಾತ್ರಿಯವರೆಗೂ ಚಂಡಮಾರುತ ಬೀಸುತ್ತದೆ ಎಂದು ತಿಳಿಸಿದೆ.

ಚೆಂಗಲ್ಪಟ್ಟು, ಕಂಚಿಯಲ್ಲಿ ರೆಡ್ ಅಲರ್ಟ್ ಘೋಷಣೆ
ಈ ನಡುವೆ ಹವಾಮಾನ ಇಲಾಖೆಯು ಪುದುಚೇರಿ ಮತ್ತು ಕಾಂಚೀಪುರಂ, ಚೆಂಗಲ್‌ಪೇಟ್ ಮತ್ತು ವಿಲ್ಲುಪುರಂಗೆ ರೆಡ್ ಅಲರ್ಟ್ ಮತ್ತು ಚೆನ್ನೈ, ತಿರುವಳ್ಳೂರು, ರಾಣಿಪೇಟ್, ವೆಲ್ಲೂರು, ತಿರುವಣ್ಣಾಮಲೈ, ತಿರುಪತ್ತೂರ್, ಕಲ್ಲಕುರಿಚಿ ಮತ್ತು ಕಡಲೂರಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಮುಖ್ಯ ಕಾರ್ಯದರ್ಶಿ ವಿ ಇರೈ ಅನ್ಬು ಅವರು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪ್ರಮುಖ ಇಲಾಖೆಗಳ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದರು. ಎನ್‌ಡಿಆರ್‌ಎಫ್‌ನ ಒಟ್ಟು 12 ತಂಡಗಳು ಮತ್ತು 396 ಸಿಬ್ಬಂದಿಯನ್ನು ಒಳಗೊಂಡ ತಮಿಳುನಾಡು ವಿಪತ್ತು ನಿರ್ವಹಣಾ ಪಡೆಯನ್ನು 10 ಜಿಲ್ಲೆಗಳಿಗೆ ರವಾನಿಸಲಾಗಿದೆ.

ಶಿಕ್ಷಣ ಇಲಾಖೆಯು ಡಿಸೆಂಬರ್ 10 ರಂದು ನಿಗದಿಯಾಗಿದ್ದ ತಮಿಳುನಾಡು ಗ್ರಾಮೀಣ ವಿದ್ಯಾರ್ಥಿಗಳ ಟ್ಯಾಲೆಂಟ್ ಸರ್ಚ್ ಪರೀಕ್ಷೆಯನ್ನು ಡಿಸೆಂಬರ್ 17 ಕ್ಕೆ ಮುಂದೂಡಿದೆ. ಅಣ್ಣಾ ವಿಶ್ವವಿದ್ಯಾನಿಲಯವು ಶುಕ್ರವಾರ ನಿಗದಿಯಾಗಿದ್ದ ತನ್ನ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಕೂಡ ಮುಂದೂಡಿದೆ.

ತಾಂತ್ರಿಕ ಶಿಕ್ಷಣ ನಿರ್ದೇಶನಾಲಯ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಸೆಮಿಸ್ಟರ್ ಪರೀಕ್ಷೆಗಳನ್ನೂ ಮುಂದೂಡಿದೆ. ಡಿಸೆಂಬರ್ 9 ರಂದು ನಿಗದಿಯಾಗಿದ್ದ ಪರೀಕ್ಷೆಯು ಈಗ ಡಿಸೆಂಬರ್ 16 ರಂದು ನಡೆಯಲಿದ್ದು, ಉಳಿದ ವೇಳಾಪಟ್ಟಿ ನಿಗದಿಯಂತಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮಗಳು

  • ಜನರು ಎಲ್ಲಾ ಅಗತ್ಯ ವಸ್ತುಗಳು, ತರಕಾರಿಗಳು ಮತ್ತು ಹಾಲನ್ನು ಸಂಗ್ರಹಿಸಬೇಕು
  • ಅಣೆಕಟ್ಟುಗಳು ಮತ್ತು ಜಲಮೂಲಗಳ ಒಳಹರಿವು, ಹೊರಹರಿವು ಮತ್ತು ಶೇಖರಣಾ ಮಟ್ಟವನ್ನು ಅಧಿಕಾರಿಗಳು ಗಡಿಯಾರದ ಮುಳ್ಳಿನಂತೆ ಮೇಲ್ವಿಚಾರಣೆ ಮಾಡಬೇಕು. ಎಲ್ಲಾ ಅಗತ್ಯ ವಸ್ತುಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು.
  • ತಗ್ಗು ಪ್ರದೇಶಗಳು ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಬೇಕು ಮತ್ತು ಶಿಬಿರಗಳಲ್ಲಿ ವ್ಯವಸ್ಥೆ ಕಲ್ಪಿಸುವುದು.
  • ಟ್ರಾನ್ಸ್‌ಫಾರ್ಮರ್‌ಗಳನ್ನು ಸಿದ್ಧಪಡಿಸಬೇಕು ಮತ್ತು ವಿದ್ಯುತ್ ಪೂರೈಕೆಯನ್ನು ಪುನಃಸ್ಥಾಪಿಸಲು ತಂಡಗಳನ್ನು ರಚಿಸಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT