ಸಂಗ್ರಹ ಚಿತ್ರ 
ದೇಶ

ನೇಮಕಾತಿ 2022: ಅಂಚೆ ಇಲಾಖೆಯಲ್ಲಿ 7 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಅಂಚೆ ಇಲಾಖೆಯಲ್ಲಿ 7 ನುರಿತ ಕುಶಲಕರ್ಮಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಹಾಕಲು 8ನೇ ತರಗತಿ ಪಾಸಾಗಿದ್ರೆ ಸಾಕು. 

ಭಾರತೀಯ ಅಂಚೆ ಇಲಾಖೆಯಲ್ಲಿ 7 ನುರಿತ ಕುಶಲಕರ್ಮಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಹಾಕಲು 8ನೇ ತರಗತಿ ಪಾಸಾಗಿದ್ರೆ ಸಾಕು. 

ಹುದ್ದೆ: ಎಂ.ವಿ ಮೆಕ್ಯಾನಿಕ್, ಎಂ.ವಿ ಎಲೆಕ್ಟ್ರಿಷಿಯನ್, ಕೂಪರ್ & ಟಿನ್​ಸ್ಮಿತ್ (ನುರಿತ), ಅಪ್​ಹೋಲ್​ಸ್ಟರ್ (ನುರಿತ), 
ಒಟ್ಟು ಹುದ್ದೆಗಳು: 7
ಕರ್ತವ್ಯ ಸ್ಥಳ: ತಮಿಳುನಾಡು

ಶೈಕ್ಷಣಿಕ ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ ಪಾಸಾಗಿರಬೇಕು.

ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಜುಲೈ, 01, 2022ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ- 3 ವರ್ಷ, ಎಸ್​​ಸಿ ಅಭ್ಯರ್ಥಿಗಳಿಗೆ- 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.

ವೇತನ: ತಿಂಗಳಿಗೆ 19,900-63,200 ರೂ. ವೇತನ

ಅರ್ಜಿ ಶುಲ್ಕ: ಅರ್ಜಿ ಶುಲ್ಕ- 100 ರೂ. ಪರೀಕ್ಷೆ ಶುಲ್ಕ- 400 ರೂ. ಎಸ್​​ಸಿ/ಎಸ್​ಟಿ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ. ಅರ್ಜಿ ಶುಲ್ಕ ಪಾವತಿಸುವ ಬಗೆ-IPO/UCR ರೆಸಿಪ್ಟ್​

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್​ ಲಿಸ್ಟ್​ ಹಾಗೂ ಟ್ರೇಡ್ ಟೆಸ್ಟ್​ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಕೆ:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಬೇಕು. 
ಸೀನಿಯರ್ ಮ್ಯಾನೇಜರ್(JAG), 
ಮೇಲ್ ಮೋಟಾರ್ ಸರ್ವೀಸ್, 
ನಂ.-37, ಗ್ರೀಮ್ಸ್​ ರಸ್ತೆ, 
ಚೆನ್ನೈ-600006

ಅರ್ಜಿ ಹಾಕಲು ಕೊನೆಯ ದಿನ: ಜನವರಿ 9, 2023

ಅರ್ಜಿ ಸಲ್ಲಿಕೆ ಮತ್ತು ಅಧಿಸೂಚನೆ ಕುರಿತ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
https://bityl.co/G6hY
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT