ಅಫ್ತಾಬ್ 
ದೇಶ

ಶ್ರದ್ಧಾ ಹತ್ಯೆ ಪ್ರಕರಣ: ಆರೋಪಿ ಅಫ್ತಾಬ್ ಪೂನಾವಾಲಾ ನ್ಯಾಯಾಂಗ ಬಂಧನ 14 ದಿನ ವಿಸ್ತರಣೆ

ಅಫ್ತಾಬ್ ಅಮೀನ್ ಪೂನಾವಾಲಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ಸಾಕೇತ್ ನ್ಯಾಯಾಲಯವು 14 ದಿನಗಳವರೆಗೆ ವಿಸ್ತರಿಸಿದೆ.

ನವದೆಹಲಿ: ಅಫ್ತಾಬ್ ಅಮೀನ್ ಪೂನಾವಾಲಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ಸಾಕೇತ್ ನ್ಯಾಯಾಲಯವು 14 ದಿನಗಳವರೆಗೆ ವಿಸ್ತರಿಸಿದೆ.

ಶ್ರದ್ಧಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಫ್ತಾಬ್'ನನ್ನು ಇಂದು ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.

ದೆಹಲಿ ಪೊಲೀಸರು ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಕೋರಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದರು. ವಿಚಾರಣೆಯ ನಂತರ ನ್ಯಾಯಾಲಯವು ಪೂನಾವಾಲಾನ ನ್ಯಾಯಾಂಗ ಬಂಧನವನ್ನು ವಿಸ್ತರಿಸಿತು.

ಇದಕ್ಕೂ ಮುನ್ನ ನ್ಯಾಯಾಲಯವು ಅಫ್ತಾಬ್‌ನನ್ನು 13 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು ಅದು ಇಂದಿಗೆ ಕೊನೆಗೊಳ್ಳಲಿದೆ.

ಅಫ್ತಾಬ್ ಪೂನವಾಲಾ ದೆಹಲಿಯ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ತನ್ನೊಂದಿಗಿದ್ದ ಪ್ರೇಯಸಿ ಶ್ರದ್ಧಾಳನ್ನು ಕೊಂದು ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿರಿಸಿ ನಂತರ ಮೃತ ದೇಹದ ಭಾಗಗಳನ್ನು ರಾಷ್ಟ್ರ ರಾಜಧಾನಿಯಾದ್ಯಂತ ವಿವಿಧ ಸ್ಥಳಗಳಲ್ಲಿ ಎಸೆದಿದ್ದ.

ಅಫ್ತಾಬ್‌ನಲ್ಲಿ ಪಾಲಿಗ್ರಾಫ್ ಮತ್ತು ನಾರ್ಕೋ ಪರೀಕ್ಷೆಗಳನ್ನು ನಡೆಸಲಾಗಿದ್ದು, ಪೊಲೀಸರು ಈಗ ತಮ್ಮ ಪ್ರಕರಣವನ್ನು ಬಲಪಡಿಸಲು ಎಫ್‌ಎಸ್‌ಎಲ್ ವರದಿಗಾಗಿ ಕಾಯುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!